ಸುಳ್ಯ: ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಒಂದು ತಿಂಗಳ ರಾಜ್ಯಮಟ್ಟದ ಅರೆಭಾಷೆ ರಂಗ ತರಬೇತಿ ಶಿಬಿರ ಹಳೆಗೇಟು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಫೆ.3 ರಂದು ಆರಂಭಗೊಂಡಿತ್ತು.
ಹಿರಿಯ ರಂಗಕರ್ಮಿ ತುಕಾರಾಂ ಏನೆಕಲ್ಲು ಉದ್ಘಾಟಿಸಿದರು. ರಂಗಭೂಮಿ ಒಂದು ಪ್ರಬಲ ಮಾಧ್ಯಮ, ಇದು ಬದುಕು ಕಟ್ಟುವುದನ್ನು ಕಲಿಸಿಕೊಡುತ್ತದೆ. ರಂಗ ತರಬೇತಿಯು ಭಾಷಾ ವಿಸ್ತಾರದ ಕೆಲಸ ಎಂದು ಅವರು ಹೇಳಿದರು.
ಮುಖ್ಯ ಅತಿಥಿ ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಮಾತನಾಡಿ, ನಾಟಕ ಕ್ಷೇತ್ರ ಮುಖವಾಡಗಳನ್ನು ಕಳಚಿ ನಮ್ಮನ್ನು ಶುದ್ಧ ಮನುಷ್ಯರನ್ನಾಗಿಸುತ್ತದೆ. ಅರೆಭಾಷೆ ಎಲ್ಲರ ಭಾಷೆಯಾಗಿ ಬೆಳೆಯುವಲ್ಲಿ ರಂಗ ತರಬೇತಿ ಒಂದು ಮಹತ್ವದ ವೇದಿಕೆ ಆಗಲಿ ಎಂದರು.
ಅರೆಭಾಷೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ರಾಂ ಸುಳ್ಳಿ, ರಂಗಕರ್ಮಿ ಎಂ.ಎಸ್. ಜಯಪ್ರಕಾಶ್, ಜೀವನ್ರಾಂ ಸುಳ್ಯ ಮಾತನಾಡಿದರು.
ಅರೆಭಾಷೆ ಅಕಾಡೆಮಿ ಸದಸ್ಯ ಧನಂಜಯ ಅಗೊಳಿಕಜೆ ಸ್ವಾಗತಿಸಿದರು. ವಿನೋದ್ ಮೂಡಗದ್ದೆ ವಂದಿಸಿದರು. ಎ.ಟಿ.ಕುಸುಮಾಧರ ಕಾರ್ಯಕ್ರಮ ನಿರೂಪಿಸಿದರು.
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…