ಸುಳ್ಯ: ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಒಂದು ತಿಂಗಳ ರಾಜ್ಯಮಟ್ಟದ ಅರೆಭಾಷೆ ರಂಗ ತರಬೇತಿ ಶಿಬಿರ ಹಳೆಗೇಟು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಫೆ.3 ರಂದು ಆರಂಭಗೊಂಡಿತ್ತು.
ಹಿರಿಯ ರಂಗಕರ್ಮಿ ತುಕಾರಾಂ ಏನೆಕಲ್ಲು ಉದ್ಘಾಟಿಸಿದರು. ರಂಗಭೂಮಿ ಒಂದು ಪ್ರಬಲ ಮಾಧ್ಯಮ, ಇದು ಬದುಕು ಕಟ್ಟುವುದನ್ನು ಕಲಿಸಿಕೊಡುತ್ತದೆ. ರಂಗ ತರಬೇತಿಯು ಭಾಷಾ ವಿಸ್ತಾರದ ಕೆಲಸ ಎಂದು ಅವರು ಹೇಳಿದರು.
ಮುಖ್ಯ ಅತಿಥಿ ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಮಾತನಾಡಿ, ನಾಟಕ ಕ್ಷೇತ್ರ ಮುಖವಾಡಗಳನ್ನು ಕಳಚಿ ನಮ್ಮನ್ನು ಶುದ್ಧ ಮನುಷ್ಯರನ್ನಾಗಿಸುತ್ತದೆ. ಅರೆಭಾಷೆ ಎಲ್ಲರ ಭಾಷೆಯಾಗಿ ಬೆಳೆಯುವಲ್ಲಿ ರಂಗ ತರಬೇತಿ ಒಂದು ಮಹತ್ವದ ವೇದಿಕೆ ಆಗಲಿ ಎಂದರು.
ಅರೆಭಾಷೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ರಾಂ ಸುಳ್ಳಿ, ರಂಗಕರ್ಮಿ ಎಂ.ಎಸ್. ಜಯಪ್ರಕಾಶ್, ಜೀವನ್ರಾಂ ಸುಳ್ಯ ಮಾತನಾಡಿದರು.
ಅರೆಭಾಷೆ ಅಕಾಡೆಮಿ ಸದಸ್ಯ ಧನಂಜಯ ಅಗೊಳಿಕಜೆ ಸ್ವಾಗತಿಸಿದರು. ವಿನೋದ್ ಮೂಡಗದ್ದೆ ವಂದಿಸಿದರು. ಎ.ಟಿ.ಕುಸುಮಾಧರ ಕಾರ್ಯಕ್ರಮ ನಿರೂಪಿಸಿದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…