ಸುಳ್ಯ: ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಒಂದು ತಿಂಗಳ ರಾಜ್ಯಮಟ್ಟದ ಅರೆಭಾಷೆ ರಂಗ ತರಬೇತಿ ಶಿಬಿರ ಹಳೆಗೇಟು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಫೆ.3 ರಂದು ಆರಂಭಗೊಂಡಿತ್ತು.
ಹಿರಿಯ ರಂಗಕರ್ಮಿ ತುಕಾರಾಂ ಏನೆಕಲ್ಲು ಉದ್ಘಾಟಿಸಿದರು. ರಂಗಭೂಮಿ ಒಂದು ಪ್ರಬಲ ಮಾಧ್ಯಮ, ಇದು ಬದುಕು ಕಟ್ಟುವುದನ್ನು ಕಲಿಸಿಕೊಡುತ್ತದೆ. ರಂಗ ತರಬೇತಿಯು ಭಾಷಾ ವಿಸ್ತಾರದ ಕೆಲಸ ಎಂದು ಅವರು ಹೇಳಿದರು.
ಮುಖ್ಯ ಅತಿಥಿ ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಮಾತನಾಡಿ, ನಾಟಕ ಕ್ಷೇತ್ರ ಮುಖವಾಡಗಳನ್ನು ಕಳಚಿ ನಮ್ಮನ್ನು ಶುದ್ಧ ಮನುಷ್ಯರನ್ನಾಗಿಸುತ್ತದೆ. ಅರೆಭಾಷೆ ಎಲ್ಲರ ಭಾಷೆಯಾಗಿ ಬೆಳೆಯುವಲ್ಲಿ ರಂಗ ತರಬೇತಿ ಒಂದು ಮಹತ್ವದ ವೇದಿಕೆ ಆಗಲಿ ಎಂದರು.
ಅರೆಭಾಷೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ರಾಂ ಸುಳ್ಳಿ, ರಂಗಕರ್ಮಿ ಎಂ.ಎಸ್. ಜಯಪ್ರಕಾಶ್, ಜೀವನ್ರಾಂ ಸುಳ್ಯ ಮಾತನಾಡಿದರು.
ಅರೆಭಾಷೆ ಅಕಾಡೆಮಿ ಸದಸ್ಯ ಧನಂಜಯ ಅಗೊಳಿಕಜೆ ಸ್ವಾಗತಿಸಿದರು. ವಿನೋದ್ ಮೂಡಗದ್ದೆ ವಂದಿಸಿದರು. ಎ.ಟಿ.ಕುಸುಮಾಧರ ಕಾರ್ಯಕ್ರಮ ನಿರೂಪಿಸಿದರು.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…