ಸುಳ್ಯ: ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಒಂದು ತಿಂಗಳ ರಾಜ್ಯಮಟ್ಟದ ಅರೆಭಾಷೆ ರಂಗ ತರಬೇತಿ ಶಿಬಿರ ಹಳೆಗೇಟು ರಂಗಮನೆ ಸಾಂಸ್ಕೃತಿಕ ಕಲಾಕೇಂದ್ರದಲ್ಲಿ ಫೆ.3 ರಂದು ಆರಂಭಗೊಂಡಿತ್ತು.
ಹಿರಿಯ ರಂಗಕರ್ಮಿ ತುಕಾರಾಂ ಏನೆಕಲ್ಲು ಉದ್ಘಾಟಿಸಿದರು. ರಂಗಭೂಮಿ ಒಂದು ಪ್ರಬಲ ಮಾಧ್ಯಮ, ಇದು ಬದುಕು ಕಟ್ಟುವುದನ್ನು ಕಲಿಸಿಕೊಡುತ್ತದೆ. ರಂಗ ತರಬೇತಿಯು ಭಾಷಾ ವಿಸ್ತಾರದ ಕೆಲಸ ಎಂದು ಅವರು ಹೇಳಿದರು.
ಮುಖ್ಯ ಅತಿಥಿ ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲ ಮಾತನಾಡಿ, ನಾಟಕ ಕ್ಷೇತ್ರ ಮುಖವಾಡಗಳನ್ನು ಕಳಚಿ ನಮ್ಮನ್ನು ಶುದ್ಧ ಮನುಷ್ಯರನ್ನಾಗಿಸುತ್ತದೆ. ಅರೆಭಾಷೆ ಎಲ್ಲರ ಭಾಷೆಯಾಗಿ ಬೆಳೆಯುವಲ್ಲಿ ರಂಗ ತರಬೇತಿ ಒಂದು ಮಹತ್ವದ ವೇದಿಕೆ ಆಗಲಿ ಎಂದರು.
ಅರೆಭಾಷೆ ಸಾಂಸ್ಕೃತಿಕ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿದ್ದರು. ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್ರಾಂ ಸುಳ್ಳಿ, ರಂಗಕರ್ಮಿ ಎಂ.ಎಸ್. ಜಯಪ್ರಕಾಶ್, ಜೀವನ್ರಾಂ ಸುಳ್ಯ ಮಾತನಾಡಿದರು.
ಅರೆಭಾಷೆ ಅಕಾಡೆಮಿ ಸದಸ್ಯ ಧನಂಜಯ ಅಗೊಳಿಕಜೆ ಸ್ವಾಗತಿಸಿದರು. ವಿನೋದ್ ಮೂಡಗದ್ದೆ ವಂದಿಸಿದರು. ಎ.ಟಿ.ಕುಸುಮಾಧರ ಕಾರ್ಯಕ್ರಮ ನಿರೂಪಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…