Advertisement
ಸಾಹಿತ್ಯ

ಅರೆಭಾಷೆ ,ಸಂಸ್ಕೃತಿ, ಸಾಹಿತ್ಯ ಬೆಳವಣಿಗೆ ಕಡೆಗೆ ಆದ್ಯತೆ – ಲಕ್ಷ್ಮೀನಾರಾಯಣ ಕಜೆಗದ್ದೆ

Share

ಸುಳ್ಯ: ಅರೆಭಾಷೆಯ ಜೊತೆಗೆ ನಾಡಿನಾದ್ಯಂತ ಪಸರಿಸಬೇಕು. ಅದರ ಜೊತೆಗೆ ಅರೆಭಾಷೆ ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಯಾಗಬೇಕು. ಈ ನಿಟ್ಟಿನಲ್ಲಿನ ಯೋಜನೆ ಹಾಗೂ ಯೋಚನೆ ಹಾಕಿಕೊಳ್ಳಲಾಗುವುದು  ಎಂದು ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Advertisement

“ಸುಳ್ಯನ್ಯೂಸ್.ಕಾಂ” ಗೆ ನೀಡಿದ ವಿಶೇಷ ಸಂದರ್ಶನದಲ್ಲಿ  ಮಾತನಾಡಿದ ಅವರು, ಭಾಷೆ ಹಾಗೂ ಸಂಸ್ಕೃತಿ ನಾಡಿನಾದ್ಯಂತ ಬೆಳೆಯಲು ನಾಟಕ ಸೇರಿದಂತೆ ಇತರ ಮಾದ್ಯಮಗಳ ಅಗತ್ಯವೂ ಇದೆ. ಇದರ ಜೊತೆಗೆ ನಗರ ಪ್ರದೇಶದಲ್ಲಿ ಇರುವ ಅರೆಭಾಷೆದ ಸಮುದಾಯದ ಮಂದಿಯ ಮಕ್ಕಳು ಅರೆಭಾಷೆ ಮಾತನಾಡುವಂತೆ ಆಗಬೇಕು. ಇದಕ್ಕಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಚನೆ ಇದೆ ಎಂದರು.

ಹಿರಿಯರ ಮಾರ್ಗದರ್ಶನ, ಸಹಕಾರದಲ್ಲಿ ಯುವಕರನ್ನು ಜೊತೆಸೇರಿಸಿ ಸಂಘಟನೆ ಮಾಡುವುದಾಗಿ ಹೇಳಿದ ಲಕ್ಷ್ಮೀನಾರಾಯಣ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸ್ಥಾನ ನಿರೀಕ್ಷೆ ಮಾಡಿರಲಿಲ್ಲ. ಇದಕ್ಕಾಗಿ ಯಾವುದೇ ಪ್ರಯತ್ನವೂ ಮಾಡಲಿಲ್ಲ. ಆದರೆ ಗುರುತಿಸಿ ಈ ಸ್ಥಾನ ನೀಡಿರುವುದಕ್ಕೆ ಎಲ್ಲಾ ಹಿರಿಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ಅಕಾಡೆಮಿ ಕೆಲಸ ಹೊಸದು. ಆದರೆ ಅನುದಾನಗಳನ್ನು ತರಿಸಿ ಕಾರ್ಯಕ್ರಮ ಮಾಡಿರುತ್ತೇವೆ. ಭಾಷೆ, ಸಾಹಿತ್ಯ, ಸಂಸ್ಕೃತಿಗೆ ಕೆಲಸ ಮಾಡಿದ ಅನುಭವ ಇದೆ. ಹೀಗಾಗಿ ಅಕಾಡೆಮಿಗಳ ಪರಿಚಯ ಇದೆ ಎನ್ನುತ್ತಾರೆ.

ಅಕಾಡೆಮಿಗಳು ಒಂದು ಉದ್ದೇಶ ಹೊಂದಿರುತ್ತದೆ. ಇದೇ ಉದ್ದೇಶ ಎಲ್ಲರದ್ದೂ ಆಗಿರುತ್ತದೆ. ಇಲ್ಲಿ ವ್ಯಕ್ತಿಯಲ್ಲ ಉದ್ದೇಶ ಮುಖ್ಯವಾಗುತ್ತದೆ. ಹೀಗಾಗಿ ಅರೆಭಾಷೆ , ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಯೇ ಎಲ್ಲರ ಉದ್ದೇಶ ಆಗಿರುವುದರಿಂದ  ಎಲ್ಲೂ ಭಿನ್ನಾಭಿಪ್ರಾಯ ಇರಲಾರದು. ವೈಯಕ್ತಿಕ ಭಿನ್ನಾಭಿಪ್ರಾಯ ಮರೆತು ಉದ್ದೇಶಕ್ಕಾಗಿ ಕೆಲಸ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಸಂಘಟನೆಯ, ಅರೆಭಾಷಿಕರ , ಎಲ್ಲಾ ಹಿರಿಯರ, ಎಲ್ಲಾ ಭಾಷಿಕರನ್ನು ಜೊತೆ ಸೇರಿಸಿ ಮುಂದುವರಿಯುವೆ ಎಂದು ಲಕ್ಷ್ಮೀನಾರಾಯಣ ಕಜೆಗದ್ದೆ  ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

5 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

5 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

21 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

22 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

22 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

22 hours ago