Advertisement
ಸಾಹಿತ್ಯ

ಅರೆಭಾಷೆ ,ಸಂಸ್ಕೃತಿ, ಸಾಹಿತ್ಯ ಬೆಳವಣಿಗೆ ಕಡೆಗೆ ಆದ್ಯತೆ – ಲಕ್ಷ್ಮೀನಾರಾಯಣ ಕಜೆಗದ್ದೆ

Share

ಸುಳ್ಯ: ಅರೆಭಾಷೆಯ ಜೊತೆಗೆ ನಾಡಿನಾದ್ಯಂತ ಪಸರಿಸಬೇಕು. ಅದರ ಜೊತೆಗೆ ಅರೆಭಾಷೆ ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಯಾಗಬೇಕು. ಈ ನಿಟ್ಟಿನಲ್ಲಿನ ಯೋಜನೆ ಹಾಗೂ ಯೋಚನೆ ಹಾಕಿಕೊಳ್ಳಲಾಗುವುದು  ಎಂದು ಅರೆಭಾಷೆ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“ಸುಳ್ಯನ್ಯೂಸ್.ಕಾಂ” ಗೆ ನೀಡಿದ ವಿಶೇಷ ಸಂದರ್ಶನದಲ್ಲಿ  ಮಾತನಾಡಿದ ಅವರು, ಭಾಷೆ ಹಾಗೂ ಸಂಸ್ಕೃತಿ ನಾಡಿನಾದ್ಯಂತ ಬೆಳೆಯಲು ನಾಟಕ ಸೇರಿದಂತೆ ಇತರ ಮಾದ್ಯಮಗಳ ಅಗತ್ಯವೂ ಇದೆ. ಇದರ ಜೊತೆಗೆ ನಗರ ಪ್ರದೇಶದಲ್ಲಿ ಇರುವ ಅರೆಭಾಷೆದ ಸಮುದಾಯದ ಮಂದಿಯ ಮಕ್ಕಳು ಅರೆಭಾಷೆ ಮಾತನಾಡುವಂತೆ ಆಗಬೇಕು. ಇದಕ್ಕಾಗಿ ಕಾರ್ಯಕ್ರಮ ಹಮ್ಮಿಕೊಳ್ಳುವ ಯೋಚನೆ ಇದೆ ಎಂದರು.

ಹಿರಿಯರ ಮಾರ್ಗದರ್ಶನ, ಸಹಕಾರದಲ್ಲಿ ಯುವಕರನ್ನು ಜೊತೆಸೇರಿಸಿ ಸಂಘಟನೆ ಮಾಡುವುದಾಗಿ ಹೇಳಿದ ಲಕ್ಷ್ಮೀನಾರಾಯಣ ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸ್ಥಾನ ನಿರೀಕ್ಷೆ ಮಾಡಿರಲಿಲ್ಲ. ಇದಕ್ಕಾಗಿ ಯಾವುದೇ ಪ್ರಯತ್ನವೂ ಮಾಡಲಿಲ್ಲ. ಆದರೆ ಗುರುತಿಸಿ ಈ ಸ್ಥಾನ ನೀಡಿರುವುದಕ್ಕೆ ಎಲ್ಲಾ ಹಿರಿಯರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.ಅಕಾಡೆಮಿ ಕೆಲಸ ಹೊಸದು. ಆದರೆ ಅನುದಾನಗಳನ್ನು ತರಿಸಿ ಕಾರ್ಯಕ್ರಮ ಮಾಡಿರುತ್ತೇವೆ. ಭಾಷೆ, ಸಾಹಿತ್ಯ, ಸಂಸ್ಕೃತಿಗೆ ಕೆಲಸ ಮಾಡಿದ ಅನುಭವ ಇದೆ. ಹೀಗಾಗಿ ಅಕಾಡೆಮಿಗಳ ಪರಿಚಯ ಇದೆ ಎನ್ನುತ್ತಾರೆ.

ಅಕಾಡೆಮಿಗಳು ಒಂದು ಉದ್ದೇಶ ಹೊಂದಿರುತ್ತದೆ. ಇದೇ ಉದ್ದೇಶ ಎಲ್ಲರದ್ದೂ ಆಗಿರುತ್ತದೆ. ಇಲ್ಲಿ ವ್ಯಕ್ತಿಯಲ್ಲ ಉದ್ದೇಶ ಮುಖ್ಯವಾಗುತ್ತದೆ. ಹೀಗಾಗಿ ಅರೆಭಾಷೆ , ಸಂಸ್ಕೃತಿ, ಸಾಹಿತ್ಯದ ಬೆಳವಣಿಗೆಯೇ ಎಲ್ಲರ ಉದ್ದೇಶ ಆಗಿರುವುದರಿಂದ  ಎಲ್ಲೂ ಭಿನ್ನಾಭಿಪ್ರಾಯ ಇರಲಾರದು. ವೈಯಕ್ತಿಕ ಭಿನ್ನಾಭಿಪ್ರಾಯ ಮರೆತು ಉದ್ದೇಶಕ್ಕಾಗಿ ಕೆಲಸ ಮಾಡುತ್ತಾರೆ ಎನ್ನುವ ನಂಬಿಕೆ ಇದೆ. ಸಂಘಟನೆಯ, ಅರೆಭಾಷಿಕರ , ಎಲ್ಲಾ ಹಿರಿಯರ, ಎಲ್ಲಾ ಭಾಷಿಕರನ್ನು ಜೊತೆ ಸೇರಿಸಿ ಮುಂದುವರಿಯುವೆ ಎಂದು ಲಕ್ಷ್ಮೀನಾರಾಯಣ ಕಜೆಗದ್ದೆ  ಹೇಳುತ್ತಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

25 minutes ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

4 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

13 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

14 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

15 hours ago