Advertisement
ಸುದ್ದಿಗಳು

ಅರ್ಚಕರಿಗೆ ಹಲ್ಲೆ ಪ್ರಕರಣ | ಗೃಹರಕ್ಷಕ ದಳದ ಸಿಬಂದಿಯೂ ಅಮಾನತು | ಲಾಕ್ಡೌನ್ ಸನ್ನಿವೇಶದಲ್ಲೂ 24 ಗಂಟೆಯಲ್ಲಿ ನ್ಯಾಯ | ಕುಕ್ಕೆ ಸುಬ್ರಹ್ಮಣ್ಯನ ಮಹಿಮೆಯೇ ಇದು |

Share

ಸುಬ್ರಹ್ಮಣ್ಯ: ರಾಜ್ಯದ ಮಾತ್ರವಲ್ಲ ದೇಶದ ಪ್ರಮುಖ ಆರಾಧನಾ ಕೇಂದ್ರ ಕುಕ್ಕೆ ಸುಬ್ರಹ್ಮಣ್ಯ. ಜನರ ಧಾರ್ಮಿಕ ಶ್ರದ್ದಾಕೇಂದ್ರ. ಇಲ್ಲಿ ನಡೆಯುವ ಪ್ರತೀ ಘಟನೆಗಳೂ ಆಸ್ತಿಕರ ಮೇಲೆ ಪರಿಣಾಮ ಬೀರುತ್ತದೆ. ಅಂತಹದ್ದರಲ್ಲಿ  ದೇವಸ್ಥಾನದ ಅರ್ಚಕರೊಬ್ಬರು ಲಾಕ್ಡೌನ್ ಸಂದರ್ಭ ಏಕಾಂಗಿಯಾಗಿ ಸಾಗುತ್ತಿದ್ದಾಗ ಪೊಲೀಸ್ ಸಿಬಂದಿ ಶಂಕರ್ ಸಂಸಿ ಎಂಬವರು ದಾರಿಯಲ್ಲಿ ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎನ್ನುವುದು  ರಾಜ್ಯಾದ್ಯಂತ ಸಂಚಲನ  ಉಂಟುಮಾಡಿತ್ತು. ಆದರೆ ಈ ಘಟನೆ ನಡೆದ 24 ಗಂಟೆಯಲ್ಲಿ ಹಲ್ಲೆ ನಡೆಸಿದ ಪೊಲೀಸ್ ಸಿಬಂದಿ ಅಮಾನತು ಮಾಡಲಾಗಿದೆ. ಅದರ ಜೊತೆಗೆ ಇದಕ್ಕೆ ಕುಮ್ಮಕ್ಕು  ನೀಡಿದ ಆರೋಪದ ಮೇರೆಗೆ ಗೃಹರಕ್ಷಕ ವೀಕೇಶ್‌ನನ್ನು ಅಮಾನತುಗೊಳಿಸಿ ಗೃಹರಕ್ಷಕ ದಳದ ಜಿಲ್ಲಾ ಕಮಾಂಡೆಂಟ್ ಮುರಳಿ ಮೋಹನ್ ಚೂಂತಾರು ಆದೇಶಿಸಿದ್ದಾರೆ.

ಲಾಕ್ಡೌನ್ ಆದೇಶ ಮಾಡಿರುವ ಪ್ರಮುಖ ಉದ್ದೇಶ ಜನರು ಗುಂಪು ಸೇರಬಾರದು ಹಾಗೂ ಸ್ಪರ್ಶವಾಗಬಾರದು, ವೈರಸ್ ಹರಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ 3 ಬಾರಿ ಭಾಷಣದಲ್ಲೂ ಸೂಚನೆ ನೀಡಿದ್ದಾರೆ. ಆದರೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಏಕಾಂಗಿಯಾಗಿ ತೆರಳುತ್ತಿದ್ದ ಸಜ್ಜನ ಅರ್ಚಕರ ಮೇಲೆ ಪೊಲೀಸ್ ಸಿಬಂದಿ ಹಲ್ಲೆ ನಡೆಸಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ತಕ್ಷಣವೇ ಘಟನೆಯನ್ನು  ವಿಪ್ರ ಸಂಘಟನೆ ಖಂಡಿಸಿತು. ಇದರ ಜೊತೆಗೆ ದೇವಸ್ಥಾನದ ಅಧಿಕಾರಿಗಳು, ಸಿಬಂದಿಗಳು ಸ್ಪಂದನೆ ನೀಡಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಜೊತೆಗೆ ಆಸ್ಥಿಕ ಬಂಧುಗಳು, ವಿವಿಧ ಸಂಘಟನೆಯ ಪ್ರಮುಖರು, ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಮಠದ ಶ್ರೀಗಳು , ಜನಪ್ರತಿನಿಧಿಗಳ ಸಹಿತ ಎಲ್ಲರೂ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿ ತಕ್ಷಣವೇ ಕ್ರಮಕ್ಕೆ ಒತ್ತಾಯಿಸಿದ್ದರು.

ಇದೆಲ್ಲಾ ಹಿನ್ನೆಲೆಯಲ್ಲಿ  ಸುಬ್ರಹ್ಮಣ್ಯದ ಪೂಜೆಗೆ ತೆರಳುತ್ತಿದ್ದ ಅರ್ಚಕರಿಗೆ  ಹಲ್ಲೆ ಮಾಡಿದ ಪೊಲೀಸ್ ಸಿಬಂದಿ ಹಾಗೂ ಕುಮ್ಮಕ್ಕು ನೀಡಿದ ಗೃಹರಕ್ಷಕ ದಳದ ಸಿಬಂದಿಯನ್ನು  24 ಗಂಟೆಯೊಳಗೆ ಅಮಾನತು ಮಾಡಲಾಗಿದೆ. ಲಾಕ್ಡೌನ್ ಪರಿಸ್ಥಿತಿಯಲ್ಲೂ , ವಿವಿಧ ಒತ್ತಡದ ನಡುವೆಯೂ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಇದು ಕುಕ್ಕೆ ಸುಬ್ರಹ್ಮಣ್ಯನ ಮಹಿಮೆಯೇ ಎಂದು ಭಕ್ತರು ಮಾತನಾಡುತ್ತಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

5 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

16 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

20 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

21 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

23 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

24 hours ago