ಕಡಬ: ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭೆ ನಡೆಯಿತು.
ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಮಕುಂಜ ಸಂಪ್ಯಾಡಿ ಶ್ರೀ ರಾಮ ಆಶ್ವಥ್ಥ ಕಟ್ಟೆ ಪೂಜಾ ಸಮಿತಿ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ಮಾತನಾಡಿ, ಹಿಂದೂ ಧರ್ಮದ ಸಾಮೂಹಿಕ ಆಚರಣೆಗಳು ಧರ್ಮ ಜಾಗೃತಿ ಮೂಡಿಸುತ್ತದೆ ಎಂದರು.
ವಾಗ್ಮಿ ಕಿರಣ್ ಕುಮಾರ್ ಪಡಪಣಂಬೂರು ಮಾತನಾಡಿ, ಜಗತ್ತಿನ ಸತ್ಯ ಭಗವಂತ ಮಾತ್ರ. ಮನುಷ್ಯ ನಿರ್ಮಲ ಮನಸ್ಸನಿಂದ ಆಧ್ಯಾತ್ಮಿಕ ಅರಿವನ್ನು ಕಂಡುಕೊಂಡಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಪುತ್ತೂರು ಯೋಜನಾಧಿಕಾರಿ ಜನಾರ್ದನ ಮಾತನಾಡಿದರು.
ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಕೃಷ್ಣ ಅತ್ರಿಜಾಲು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಕಜೆ ಉಪಸ್ಥಿತರಿದ್ದರು.
ಅರ್ಚಕರಾದ ವಿಷ್ಣುಮೂರ್ತಿ ಮತ್ತು ಕೃಷ್ಣ ಪ್ರಸಾದ್ ನೇತೃತ್ವದಲ್ಲಿ ಸಾಮೂಹಿಕ ಪೂಜೆ ನಡೆಯಿತು. ದೇವಸ್ಥಾನದ ಪ್ರದಾನ ಕಾರ್ಯದರ್ಶಿ ಪ್ರವೀಣ್ ಆಳ್ವ ನೂಚಿಲ ಪ್ರಸ್ತಾವಿಸಿ ಸ್ವಾಗತಿಸಿದರು. ಉಪಾಧ್ಯಕ್ಷ ಸುಬ್ರಹ್ಮಣ್ಯ ಗೌಡ ಎರ್ಮಲ ವಂದಿಸಿದರು. ಚೆನ್ನಕೇಶವ ಗುತ್ತುಪಾಲು ನಿರೂಪಿಸಿದರು.
ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್ಪಿಎಲ್ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…
ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…
ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…
ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…
ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…