ಕಡಬ: ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭೆ ನಡೆಯಿತು.
ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಮಕುಂಜ ಸಂಪ್ಯಾಡಿ ಶ್ರೀ ರಾಮ ಆಶ್ವಥ್ಥ ಕಟ್ಟೆ ಪೂಜಾ ಸಮಿತಿ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ಮಾತನಾಡಿ, ಹಿಂದೂ ಧರ್ಮದ ಸಾಮೂಹಿಕ ಆಚರಣೆಗಳು ಧರ್ಮ ಜಾಗೃತಿ ಮೂಡಿಸುತ್ತದೆ ಎಂದರು.
ವಾಗ್ಮಿ ಕಿರಣ್ ಕುಮಾರ್ ಪಡಪಣಂಬೂರು ಮಾತನಾಡಿ, ಜಗತ್ತಿನ ಸತ್ಯ ಭಗವಂತ ಮಾತ್ರ. ಮನುಷ್ಯ ನಿರ್ಮಲ ಮನಸ್ಸನಿಂದ ಆಧ್ಯಾತ್ಮಿಕ ಅರಿವನ್ನು ಕಂಡುಕೊಂಡಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಪುತ್ತೂರು ಯೋಜನಾಧಿಕಾರಿ ಜನಾರ್ದನ ಮಾತನಾಡಿದರು.
ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಕೃಷ್ಣ ಅತ್ರಿಜಾಲು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಕಜೆ ಉಪಸ್ಥಿತರಿದ್ದರು.
ಅರ್ಚಕರಾದ ವಿಷ್ಣುಮೂರ್ತಿ ಮತ್ತು ಕೃಷ್ಣ ಪ್ರಸಾದ್ ನೇತೃತ್ವದಲ್ಲಿ ಸಾಮೂಹಿಕ ಪೂಜೆ ನಡೆಯಿತು. ದೇವಸ್ಥಾನದ ಪ್ರದಾನ ಕಾರ್ಯದರ್ಶಿ ಪ್ರವೀಣ್ ಆಳ್ವ ನೂಚಿಲ ಪ್ರಸ್ತಾವಿಸಿ ಸ್ವಾಗತಿಸಿದರು. ಉಪಾಧ್ಯಕ್ಷ ಸುಬ್ರಹ್ಮಣ್ಯ ಗೌಡ ಎರ್ಮಲ ವಂದಿಸಿದರು. ಚೆನ್ನಕೇಶವ ಗುತ್ತುಪಾಲು ನಿರೂಪಿಸಿದರು.
31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…
ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್ಐ…
ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…
ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…
ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…
ಜೈಸಲ್ಮೇರ್ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…