ಕಡಬ: ಕುಂತೂರು ಗ್ರಾಮದ ಅರ್ಬಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಧಾರ್ಮಿಕ ಸಭೆ ನಡೆಯಿತು.
ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ರಾಮಕುಂಜ ಸಂಪ್ಯಾಡಿ ಶ್ರೀ ರಾಮ ಆಶ್ವಥ್ಥ ಕಟ್ಟೆ ಪೂಜಾ ಸಮಿತಿ ಅಧ್ಯಕ್ಷ ಸದಾಶಿವ ಶೆಟ್ಟಿ ಮಾರಂಗ ಮಾತನಾಡಿ, ಹಿಂದೂ ಧರ್ಮದ ಸಾಮೂಹಿಕ ಆಚರಣೆಗಳು ಧರ್ಮ ಜಾಗೃತಿ ಮೂಡಿಸುತ್ತದೆ ಎಂದರು.
ವಾಗ್ಮಿ ಕಿರಣ್ ಕುಮಾರ್ ಪಡಪಣಂಬೂರು ಮಾತನಾಡಿ, ಜಗತ್ತಿನ ಸತ್ಯ ಭಗವಂತ ಮಾತ್ರ. ಮನುಷ್ಯ ನಿರ್ಮಲ ಮನಸ್ಸನಿಂದ ಆಧ್ಯಾತ್ಮಿಕ ಅರಿವನ್ನು ಕಂಡುಕೊಂಡಾಗ ಭಗವಂತನ ಅನುಗ್ರಹ ಪ್ರಾಪ್ತಿಯಾಗುತ್ತದೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ದಿ ಪುತ್ತೂರು ಯೋಜನಾಧಿಕಾರಿ ಜನಾರ್ದನ ಮಾತನಾಡಿದರು.
ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಕೃಷ್ಣ ಅತ್ರಿಜಾಲು, ಉತ್ಸವ ಸಮಿತಿ ಅಧ್ಯಕ್ಷ ಕುಶಾಲಪ್ಪ ಕಜೆ ಉಪಸ್ಥಿತರಿದ್ದರು.
ಅರ್ಚಕರಾದ ವಿಷ್ಣುಮೂರ್ತಿ ಮತ್ತು ಕೃಷ್ಣ ಪ್ರಸಾದ್ ನೇತೃತ್ವದಲ್ಲಿ ಸಾಮೂಹಿಕ ಪೂಜೆ ನಡೆಯಿತು. ದೇವಸ್ಥಾನದ ಪ್ರದಾನ ಕಾರ್ಯದರ್ಶಿ ಪ್ರವೀಣ್ ಆಳ್ವ ನೂಚಿಲ ಪ್ರಸ್ತಾವಿಸಿ ಸ್ವಾಗತಿಸಿದರು. ಉಪಾಧ್ಯಕ್ಷ ಸುಬ್ರಹ್ಮಣ್ಯ ಗೌಡ ಎರ್ಮಲ ವಂದಿಸಿದರು. ಚೆನ್ನಕೇಶವ ಗುತ್ತುಪಾಲು ನಿರೂಪಿಸಿದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…