Advertisement
ಸುದ್ದಿಗಳು

ಅಲಂಕಾರಿಕ ದೀಪಗಳ ನೂತನ ಮಳಿಗೆ ‘ಮಂಗಳೂರು ಶೋ ಲೈಟ್ಸ್’ ಲೋಕಾರ್ಪಣೆ

Share

ಸುಳ್ಯ: ಸುಳ್ಯದಲ್ಲಿ ಈಗಾಗಲೇ ಪ್ರಸಿದ್ಧಿ ಪಡೆದಿರುವ ಮಂಗಳೂರು ಫರ್ನೀಚರ್ಸ್ ಸಂಸ್ಥೆಯ ನೂತನ ಅಲಂಕಾರಿಕ ದೀಪಗಳ ಮಳಿಗೆ ‘ಮಂಗಳೂರು ಶೋ ಲೈಟ್ಸ್ ಸುಳ್ಯ ಶ್ರೀರಾಮ್ ಪೇಟೆಯಲ್ಲಿರುವ ಶ್ರೀದುರ್ಗಾ ಕಾಂಪ್ಲೆಕ್ಸ್ನಲ್ಲಿ ಅಕ್ಟೋಬರ್ 6 ರವಿವಾರದಂದು ಉದ್ಘಾಟನೆಗೊಂಡಿತು.

ಮಂಗಳೂರು ಶೋ ಲೈಟ್ಸ್ ನೂತನ ಮಳಿಗೆಯನ್ನು ಸುಳ್ಯ ತಹಶೀಲ್ಧಾರ್ ಹಾಗೂ ತಾಲೂಕು ದಂಡಾಧಿಕಾರಿ ಎನ್.ಎ ಕುಂಞ ಅಹಮ್ಮದ್ ಉದ್ಘಾಟಿಸಿ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಸುಧಾಕರ ರೈ, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎನ್.ಎ. ರಾಮಚಂದ್ರ, ಎಂ.ಬಿ. ಫೌಂಡೇಶನ್ ಅಧ್ಯಕ್ಷ ಎಂ.ಬಿ. ಸದಾಶಿವ, ಬುಶ್ರಾ ಶಾಲೆಯ ಮಾಲಕರಾದ ಅಝೀಝ್ ಬುಶ್ರಾ, ಸುಳ್ಯ ಬಾರ್ ಕೌನ್ಸಿಲ್ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ರಾಜೀವ್ ಗಾಂಧಿ ಪ್ರತಿಷ್ಠಾನ ರಾಜ್ಯಾಧ್ಯಕ್ಷ ಟಿ.ಎಂ. ಶಹೀದ್, ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಸ್. ಸಂಶುದ್ದೀನ್, ಜಿಲ್ಲಾ ವಖ್ಫ್ ಬೋರ್ಡ್ ಸದಸ್ಯ ಕೆ.ಎಂ. ಮುಸ್ತಫ, ನಗರ ಪಂಚಾಯತ್ ಸದಸ್ಯೆ ಕಿಶೋರಿ ಶೇಟ್, ವೆಂಕಟ್ರಮಣ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ. ವಿಶ್ವನಾಥ್, ಕಶ್ಯಪ್ ಕಾಂಪ್ಲೆಕ್ಸ್ ಮಾಲಕರಾದ ಮೋಹನ್ ಭಟ್, ಆ್ಯಶನ್ ವುಡ್ ಪುತ್ತೂರು ಮಾಲಕರಾದ ಕೆ.ಎಂ. ಇಸ್ಮಾಯೀಲ್, ಶ್ರೀ ದುರ್ಗಾ ಕಾಂಪ್ಲೆಕ್ಸ್ ಮಾಲಕರಾದ ರಾಮಕೃಷ್ಣ ಭಟ್, ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ನಾಸಿರ್ ಪೆರಾಜೆ ಮೊದಲಾದವರು ಉಪಸ್ಥಿತರಿದ್ದರು.

ಮಂಗಳೂರು ಶೋ ಲೈಟ್ಸ್’ ನೂತನ ಮಳಿಗೆಯಲ್ಲಿ ವಿಶಾಲವಾದ ಸ್ಥಳವಿದ್ದು, ವೈವಿಧ್ಯಮಯ ಅಲಂಕಾರಿಕ ದೀಪಗಳ ಅಪಾರ ಸಂಗ್ರಹವಿದೆ. ಗ್ರಾಹಕರಿಗಾಗಿ ಅತಿ ಕಡಿಮೆ ದರದಲ್ಲಿ ದೇಶ ವಿದೇಶಗಳ ಖ್ಯಾತ ಕಂಪೆನಿಗಳ ಉತ್ಪನ್ನಗಳನ್ನು ಒಂದೇ ಸೂರಿನಡಿಯಲ್ಲಿ ಸಂಗ್ರಹ ಮಾಡಲಾಗಿದೆ.

ಗ್ರಾಹಕರಿಗೆ ಸುಲಭವಾಗಿ ತಲುಪಲು ಸುಳ್ಯದಲ್ಲಿ ನೂತನವಾಗಿ ಮಳಿಗೆಯನ್ನು ಆರಂಭಿಸಲಾಗಿದ್ದು, ಆಕರ್ಷಕ ವೈವಿಧ್ಯಮಯ ಲೈಟಿಂಗ್ಸ್ ಹಾಗೂ ಅಲಂಕಾರಿಕ ಉತ್ಪನ್ನಗಳನ್ನು ಇರಿಸಲಾಗಿದೆ. ಗ್ರಾಹಕರು ಮಂಗಳೂರು ಶೋ ಲೈಟ್ಸ್ ಸಂಸ್ಥೆಗೆ ಉತ್ತಮ ಸ್ಪಂದನೆ ನೀಡುವ ಭರವಸೆ ಇದೆ ಎಂದು ಪಾಲುದಾರರಾದ ಅಬ್ದುಲ್ ರಝಾಕ್ ಹಾಗೂ ಮಹಮ್ಮದ್.ಕೆ ಆಶಾಭಾವನೆ ವ್ಯಕ್ತಪಡಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

7 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

15 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

15 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

22 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

23 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago