Categories: ಮಾಹಿತಿ

ಅಲೆಕ್ಕಾಡಿ: ಆಂಗ್ಲಮಾಧ್ಯಮ ಶಾಲೆ ಪೂರ್ವಭಾವಿ ಸಭೆ

Share

ಅಲೆಕ್ಕಾಡಿ: ಅಲೆಕ್ಕಾಡಿ ಮುರುಳ್ಯದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭವಾಗಲಿರುವ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ ಮಾಡಲಾಯಿತು.
ಆಲಂಕಾರು ಸ.ಹಿ.ಪ್ರಾ ಶಾಲೆಯ ಮುಖ್ಯೋಪಾಧ್ಯಾಯ ನಿಂಗರಾಜು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೂರ್ವ ಪ್ರಾಥಮಿಕ ಶಾಲೆಯ ಆರಂಭಿಕ ಸವಾಲುಗಳು ಹಾಗು ಪರಿಹಾರದ ಬಗ್ಗೆ ಮಾಹಿತಿ ನೀಡಿದರು. 5 ಲಕ್ಷ ರೂ ವೆಚ್ಚದಲ್ಲಿ ಸರಕಾರಿ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆ ಆರಂಭಗೊಳ್ಳುತ್ತಿದ್ದು, ಸಮಾನ ಶಿಕ್ಷಣ ಎನ್ನುವ ಧ್ಯೇಯದೊಂದಿಗೆ 4 ವರ್ಷ 5 ತಿಂಗಳು ತುಂಬಿದ ಮಕ್ಕಳಿಗೆ ಈ ತರಗತಿಗಳನ್ನು ನಡೆಸಲಾಗುವುದು.
ಸುಮಾರು 20 ಗ್ರಾಮಸ್ಥರು ತಮ್ಮ ಮಕ್ಕಳನ್ನು ದಾಖಲಿಸುವ ಹಾಗೂ ಯೋಜನೆಗೆ ಧನಸಹಾಯ ಮಾಡುವ ಭರವಸೆಯನ್ನು ನೀಡಿದರು. ನಿವೃತ್ತ ಶಿಕ್ಷಕ ಮಿಲ್ಕ್ ಮಾಸ್ಟರ್ ರಾಘವ ಗೌಡ 1 ಲಕ್ಷ ರೂ ದೇಣಿಗೆ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಮಧು ಪಿ.ಆರ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಚಂದ್ರಿಕಾ ಬಿ., ವಲಯ ಸಂಪನ್ಮೂಲ ವ್ಯಕ್ತಿ ಜಯಂತ ಕೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ನೂಜಾಡಿ, ವೆಂಕಪ್ಪ ಗೌಡ, ಭುವನಮಣಿ, ವಾರಿಜಾ, ದಾಮೋದರ ಗೌಡ, ಸುಂದರ ಗೌಡ ಪಿಲಿಕುಂಜೆ, ಸುಪ್ರಿಯಾ ವಸಂತ್‍ಕುಮಾರ್, ಲಕ್ಷ್ಮೀಶ ಕೇರ್ಪಡ, ಜಲಜಾ ಶೆಟ್ಟಿ ಲಂಡನ್, ಐತಪ್ಪ ಅಲೆಕ್ಕಾಡಿ, ಸುಶಾಂತ್ ಅಲೆಕ್ಕಾಡಿ, ಉಪಸ್ಥಿತರಿದ್ದರು.ಸಹಶಿಕ್ಷಕಿ ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲಾ ಸಮಿತಿಯ ಅಧ್ಯಕ್ಷರಾಗಿ ಅವಿನಾಶ್ ದೇವರಮಜಲು, ಗೌರವಾಧ್ಯಕ್ಷರಾಗಿ ಸುದೇಶ್ ರೈ ಅಲೆಕ್ಕಾಡಿ, ಸುಂದರ ಗೌಡ, ಉಪಾಧ್ಯಕ್ಷರಾಗಿ ಐತ್ತಪ್ಪ ಅಲೆಕ್ಕಾಡಿ, ಕಾರ್ಯದರ್ಶಿಯಾಗಿ ಮಧು ಪಿ.ಆರ್ ಆಯ್ಕೆಯಾದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

5 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

5 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

5 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

5 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

5 hours ago