Advertisement
Categories: ಮಾಹಿತಿ

ಅಲೆಕ್ಕಾಡಿ: ಆಂಗ್ಲಮಾಧ್ಯಮ ಶಾಲೆ ಪೂರ್ವಭಾವಿ ಸಭೆ

Share

ಅಲೆಕ್ಕಾಡಿ: ಅಲೆಕ್ಕಾಡಿ ಮುರುಳ್ಯದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭವಾಗಲಿರುವ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ ಮಾಡಲಾಯಿತು.
ಆಲಂಕಾರು ಸ.ಹಿ.ಪ್ರಾ ಶಾಲೆಯ ಮುಖ್ಯೋಪಾಧ್ಯಾಯ ನಿಂಗರಾಜು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೂರ್ವ ಪ್ರಾಥಮಿಕ ಶಾಲೆಯ ಆರಂಭಿಕ ಸವಾಲುಗಳು ಹಾಗು ಪರಿಹಾರದ ಬಗ್ಗೆ ಮಾಹಿತಿ ನೀಡಿದರು. 5 ಲಕ್ಷ ರೂ ವೆಚ್ಚದಲ್ಲಿ ಸರಕಾರಿ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆ ಆರಂಭಗೊಳ್ಳುತ್ತಿದ್ದು, ಸಮಾನ ಶಿಕ್ಷಣ ಎನ್ನುವ ಧ್ಯೇಯದೊಂದಿಗೆ 4 ವರ್ಷ 5 ತಿಂಗಳು ತುಂಬಿದ ಮಕ್ಕಳಿಗೆ ಈ ತರಗತಿಗಳನ್ನು ನಡೆಸಲಾಗುವುದು.
ಸುಮಾರು 20 ಗ್ರಾಮಸ್ಥರು ತಮ್ಮ ಮಕ್ಕಳನ್ನು ದಾಖಲಿಸುವ ಹಾಗೂ ಯೋಜನೆಗೆ ಧನಸಹಾಯ ಮಾಡುವ ಭರವಸೆಯನ್ನು ನೀಡಿದರು. ನಿವೃತ್ತ ಶಿಕ್ಷಕ ಮಿಲ್ಕ್ ಮಾಸ್ಟರ್ ರಾಘವ ಗೌಡ 1 ಲಕ್ಷ ರೂ ದೇಣಿಗೆ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಮಧು ಪಿ.ಆರ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಚಂದ್ರಿಕಾ ಬಿ., ವಲಯ ಸಂಪನ್ಮೂಲ ವ್ಯಕ್ತಿ ಜಯಂತ ಕೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ನೂಜಾಡಿ, ವೆಂಕಪ್ಪ ಗೌಡ, ಭುವನಮಣಿ, ವಾರಿಜಾ, ದಾಮೋದರ ಗೌಡ, ಸುಂದರ ಗೌಡ ಪಿಲಿಕುಂಜೆ, ಸುಪ್ರಿಯಾ ವಸಂತ್‍ಕುಮಾರ್, ಲಕ್ಷ್ಮೀಶ ಕೇರ್ಪಡ, ಜಲಜಾ ಶೆಟ್ಟಿ ಲಂಡನ್, ಐತಪ್ಪ ಅಲೆಕ್ಕಾಡಿ, ಸುಶಾಂತ್ ಅಲೆಕ್ಕಾಡಿ, ಉಪಸ್ಥಿತರಿದ್ದರು.ಸಹಶಿಕ್ಷಕಿ ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲಾ ಸಮಿತಿಯ ಅಧ್ಯಕ್ಷರಾಗಿ ಅವಿನಾಶ್ ದೇವರಮಜಲು, ಗೌರವಾಧ್ಯಕ್ಷರಾಗಿ ಸುದೇಶ್ ರೈ ಅಲೆಕ್ಕಾಡಿ, ಸುಂದರ ಗೌಡ, ಉಪಾಧ್ಯಕ್ಷರಾಗಿ ಐತ್ತಪ್ಪ ಅಲೆಕ್ಕಾಡಿ, ಕಾರ್ಯದರ್ಶಿಯಾಗಿ ಮಧು ಪಿ.ಆರ್ ಆಯ್ಕೆಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಹವಾಮಾನ ವರದಿ | 10.08.2026 | ಕರ್ನಾಟಕದಲ್ಲಿ ಬಿಟ್ಟು ಬಿಟ್ಟು ಸಾಮಾನ್ಯ ಮಳೆ; ಆಗಸ್ಟ್‌ 12ರಂದು ಕರಾವಳಿಯಲ್ಲಿ ಮಳೆ ಹೆಚ್ಚಳ ಸಾಧ್ಯತೆ

ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…

14 hours ago

ಕಡಿಮೆ ನೀರು, ಕಡಿಮೆ ಗೊಬ್ಬರ… ಹೆಚ್ಚು ಇಳುವರಿ – ಕೃಷಿಯಲ್ಲಿ ಹೊಸ ಕ್ರಾಂತಿ

ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…

23 hours ago

ಬರದತ್ತ ಇಂಗ್ಲೆಂಡ್‌ – ಆಹಾರ ಕೊರತೆ, ಕಾಡ್ಗಿಚ್ಚಿನ ಎಚ್ಚರಿಕೆ – ಕೃಷಿಗೆ ಭಾರಿ ಹೊಡೆತ – ರೈತರಿಗೆ ₹4,400 ಕೋಟಿ ನಷ್ಟದ ಅಂದಾಜು

ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್‌ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…

23 hours ago

ಹವಾಮಾನ ವರದಿ | 09.08.2026 | ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಕ್ಷೀಣ; ಆಗಸ್ಟ್‌ 11ರಿಂದ ಮಲೆನಾಡಿನಲ್ಲೂ ಮಳೆ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…

2 days ago

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ

ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…

2 days ago

ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು

ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…

2 days ago