Advertisement
Categories: ಮಾಹಿತಿ

ಅಲೆಕ್ಕಾಡಿ: ಆಂಗ್ಲಮಾಧ್ಯಮ ಶಾಲೆ ಪೂರ್ವಭಾವಿ ಸಭೆ

Share

ಅಲೆಕ್ಕಾಡಿ: ಅಲೆಕ್ಕಾಡಿ ಮುರುಳ್ಯದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2019-20ನೇ ಶೈಕ್ಷಣಿಕ ವರ್ಷದಲ್ಲಿ ಪ್ರಾರಂಭವಾಗಲಿರುವ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯ ಪೂರ್ವಭಾವಿ ಸಭೆ ಹಾಗೂ ಸಮಿತಿ ರಚನೆ ಮಾಡಲಾಯಿತು.
ಆಲಂಕಾರು ಸ.ಹಿ.ಪ್ರಾ ಶಾಲೆಯ ಮುಖ್ಯೋಪಾಧ್ಯಾಯ ನಿಂಗರಾಜು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಪೂರ್ವ ಪ್ರಾಥಮಿಕ ಶಾಲೆಯ ಆರಂಭಿಕ ಸವಾಲುಗಳು ಹಾಗು ಪರಿಹಾರದ ಬಗ್ಗೆ ಮಾಹಿತಿ ನೀಡಿದರು. 5 ಲಕ್ಷ ರೂ ವೆಚ್ಚದಲ್ಲಿ ಸರಕಾರಿ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆ ಆರಂಭಗೊಳ್ಳುತ್ತಿದ್ದು, ಸಮಾನ ಶಿಕ್ಷಣ ಎನ್ನುವ ಧ್ಯೇಯದೊಂದಿಗೆ 4 ವರ್ಷ 5 ತಿಂಗಳು ತುಂಬಿದ ಮಕ್ಕಳಿಗೆ ಈ ತರಗತಿಗಳನ್ನು ನಡೆಸಲಾಗುವುದು.
ಸುಮಾರು 20 ಗ್ರಾಮಸ್ಥರು ತಮ್ಮ ಮಕ್ಕಳನ್ನು ದಾಖಲಿಸುವ ಹಾಗೂ ಯೋಜನೆಗೆ ಧನಸಹಾಯ ಮಾಡುವ ಭರವಸೆಯನ್ನು ನೀಡಿದರು. ನಿವೃತ್ತ ಶಿಕ್ಷಕ ಮಿಲ್ಕ್ ಮಾಸ್ಟರ್ ರಾಘವ ಗೌಡ 1 ಲಕ್ಷ ರೂ ದೇಣಿಗೆ ನೀಡುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‍ಡಿಎಂಸಿ ಅಧ್ಯಕ್ಷೆ ಮಧು ಪಿ.ಆರ್ ವಹಿಸಿದ್ದರು. ಮುಖ್ಯ ಶಿಕ್ಷಕಿ ಚಂದ್ರಿಕಾ ಬಿ., ವಲಯ ಸಂಪನ್ಮೂಲ ವ್ಯಕ್ತಿ ಜಯಂತ ಕೆ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಪೂಜಾರಿ ನೂಜಾಡಿ, ವೆಂಕಪ್ಪ ಗೌಡ, ಭುವನಮಣಿ, ವಾರಿಜಾ, ದಾಮೋದರ ಗೌಡ, ಸುಂದರ ಗೌಡ ಪಿಲಿಕುಂಜೆ, ಸುಪ್ರಿಯಾ ವಸಂತ್‍ಕುಮಾರ್, ಲಕ್ಷ್ಮೀಶ ಕೇರ್ಪಡ, ಜಲಜಾ ಶೆಟ್ಟಿ ಲಂಡನ್, ಐತಪ್ಪ ಅಲೆಕ್ಕಾಡಿ, ಸುಶಾಂತ್ ಅಲೆಕ್ಕಾಡಿ, ಉಪಸ್ಥಿತರಿದ್ದರು.ಸಹಶಿಕ್ಷಕಿ ನಳಿನಾಕ್ಷಿ ಕಾರ್ಯಕ್ರಮ ನಿರೂಪಿಸಿದರು.
ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲಾ ಸಮಿತಿಯ ಅಧ್ಯಕ್ಷರಾಗಿ ಅವಿನಾಶ್ ದೇವರಮಜಲು, ಗೌರವಾಧ್ಯಕ್ಷರಾಗಿ ಸುದೇಶ್ ರೈ ಅಲೆಕ್ಕಾಡಿ, ಸುಂದರ ಗೌಡ, ಉಪಾಧ್ಯಕ್ಷರಾಗಿ ಐತ್ತಪ್ಪ ಅಲೆಕ್ಕಾಡಿ, ಕಾರ್ಯದರ್ಶಿಯಾಗಿ ಮಧು ಪಿ.ಆರ್ ಆಯ್ಕೆಯಾದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಅಡಿಕೆಯಲ್ಲಿ ಎಲೆ ಚುಕ್ಕೆ ರೋಗದ ಸಮಗ್ರ ನಿರ್ವಹಣೆ ಹೇಗೆ..? ತಜ್ಞರಿಂದ ಸಮಗ್ರ ನಿರ್ವಹಣಾ ಮಾರ್ಗಸೂಚಿ – ಸಲಹೆ

ಅಡಿಕೆ ಎಲೆ ಚುಕ್ಕೆ ರೋಗವು ಗಾಳಿ ಮತ್ತು ತೇವಾಂಶದಿಂದ ವೇಗವಾಗಿ ಹರಡುತ್ತಿದ್ದು, ತೋಟಗಳಿಗೆ…

3 hours ago

ಬಿ ಎಸ್ ಎನ್ ಎಲ್ ವಿರುದ್ಧ ಸುಳ್ಯದ ಗ್ರಾಹಕನಿಗೆ ಜಯ – ಇಂಟರ್ನೆಟ್ ಸೇವೆಯಲ್ಲಿ ವ್ಯತ್ಯಯಕ್ಕೆ ₹30,000 ಪರಿಹಾರ ಆದೇಶ..!

ಇಂಟರ್ನೆಟ್ ಸೇವೆ ವ್ಯತ್ಯಯಕ್ಕೆ ಸುಳ್ಯದ ಗ್ರಾಹಕನಿಗೆ ₹30,000 ಪರಿಹಾರ ನೀಡಲು ಆದೇಶ. ಬಿ…

7 hours ago

ಹವಾಮಾನ ವರದಿ | 01-05-2026 | ಮಳೆಯ ಚಟುವಟಿಕೆ ಕಡಿಮೆಯಾಗುತ್ತಾ? ಮೇ 2ರಿಂದ ಕೆಲವು ದಿನ ಮಳೆ ಕಡಿಮೆ, ಬಳಿಕ ಮತ್ತೆ ಚುರುಕು..!?

ಮೇ 2ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳು ಕಂಡುಬರುತ್ತಿವೆ. ಮೇ…

7 hours ago

ಚಿಕ್ಕಮಗಳೂರಿನಲ್ಲಿ ದಾಳಿ – ಅಕ್ರಮವಾಗಿ ಸಂಗ್ರಹಿಸಿದ್ದ 181 ಯೂರಿಯಾ ಚೀಲಗಳು ಜಪ್ತಿ

ಚಿಕ್ಕಮಗಳೂರಿನಲ್ಲಿ ಅಕ್ರಮವಾಗಿ ಶೇಖರಿಸಿದ್ದ ಯೂರಿಯಾ ಗೊಬ್ಬರ ಜಪ್ತಿ ಮಾಡಲಾಗಿದೆ. 181 ಚೀಲಗಳು ಹಾಗೂ…

10 hours ago

ರಾಜ್ಯದ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ – ಮುಂದಿನ ಕೆಲ ದಿನ ಮಳೆ ಎಚ್ಚರಿಕೆ..!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.…

10 hours ago

ಪದವಿಪೂರ್ವ ಶಿಕ್ಷಣ ಮತ್ತು ನೀಟ್ ಪರೀಕ್ಷೆಯ ಒತ್ತಡ : ಪರ್ಯಾಯ ದೃಷ್ಟಿಕೋನ

NEET ಪರೀಕ್ಷೆಯ ಒತ್ತಡದಿಂದ ವಿದ್ಯಾರ್ಥಿಗಳಲ್ಲಿ ಮಾನಸಿಕ ಸಮಸ್ಯೆಗಳು ಹೆಚ್ಚುತ್ತಿವೆ. ಒತ್ತಡರಹಿತ, ಅನುಭವಾಧಾರಿತ ಶಿಕ್ಷಣ…

11 hours ago