ಆಲೆಟ್ಟಿ: ಆಲೆಟ್ಟಿ ಸರಕಾರಿ ಆಶ್ರಮ ಶಾಲೆಯಲ್ಲಿ ಪೆಬ್ರವರಿ 1 ರಂದು ಅಡುಗೆ ಸಿಬ್ಬಂದಿಯಾಗಿ ಸುಮಾರು 28 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಾಸು ಡಿ ರವರಿಗೆ ಶಾಲೆಯ ಮತ್ತು ಪೋಷಕರ ವತಿಯಿಂದ ಬೀಳ್ಕೊಡುವ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪೋಷಕ ಸಂಘದ ಅಧ್ಯಕ್ಷ ವಿಶ್ವನಾಥ ವಹಿಸಿದ್ದರು. ಸಭೆಯಲ್ಲಿ ಮುಖ್ಯ ಅಥಿತಿಯಾಗಿ ಶಾಲಾ ನಿವೃತ್ತ ಶಿಕ್ಷಕಿ ಶೇಷಮ್ಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್, ಮುಖ್ಯ ಗುರುಗಳಾದ ಮಾಧವ, ಪೋಷಕರ ಸಂಘದ ಉಪಾಧ್ಯಕ್ಷೆ ಪವಿತ್ರ, ಶಾಲಾ ನಾಯಕಿ ವೈಷ್ಣವಿ, ನಿವೃತ್ತರಾದ ವಾಸು ಅವರ ಧರ್ಮಪತ್ನಿ ವಿನೋದ ಉಪಸ್ಥಿತರಿದ್ದರು. ನಿವೃತ್ತ ವಾಸು ದಂಪತಿಗಳನ್ನು ಶಾಲೆ ಮತ್ತು ಪೊಷಕರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತರ ಕಿರು ಪರಿಚಯವನ್ನು ಶಾಲಾ ಶಿಕ್ಷಕಿ ಗೀತಾರವರು ವಾಚಿಸಿದರು.
ಅಲೆಟ್ಟಿ ಸೊಸೈಟಿ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಮ ಆಲೆಟ್ಟಿ ಹಾಗೂ ಪೋಷಕರ ಪರವಾಗಿ ಶ್ರೀಧರ ಮಾಣಿಮರ್ಧು, ವಿದ್ಯಾರ್ಥಿಗಳಾದ ವೈಷ್ಣವಿ, ಪೂರ್ವಿತಾ, ವೀಕ್ಷಿತಾ, ಸಂತೋಷ್, ಗುರುಪ್ರಸಾದ್ ,ನೂತನ್, ತುಷಾರ್ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು, ಹಳೆವಿಧ್ಯಾರ್ಥಿಗಳು, ಊರ ಅಭಿಮಾನಿಗಳು ಕಿರುಕಾಣಿಕೆ ನೀಡಿ ಹಾರ ಹಾಕಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮೋನಿಕಾ ಮತ್ತು ಕಾವ್ಯಾಂಜಲಿ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಮಾಧವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶ್ರೀಧರ ಮಾಣಿಮರ್ಧು ವಂದಿಸಿ, ಶಾಲಾ ಸಹಶಿಕ್ಷಕಿ ಹೇಮಲತಾ ಮತ್ತು ಪಂಚಾಯತ್ ಸಿಬ್ಬಂದಿ ಸೀತಾರಾಮ ಮೊರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…