ಕಾರ್ಯಕ್ರಮಗಳು

ಅಲೆಟ್ಟಿ ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ವಾಸುರವರಿಗೆ ಬೀಳ್ಕೊಡುಗೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಲೆಟ್ಟಿ: ಆಲೆಟ್ಟಿ ಸರಕಾರಿ ಆಶ್ರಮ ಶಾಲೆಯಲ್ಲಿ ಪೆಬ್ರವರಿ 1 ರಂದು ಅಡುಗೆ ಸಿಬ್ಬಂದಿಯಾಗಿ ಸುಮಾರು 28 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಾಸು ಡಿ ರವರಿಗೆ ಶಾಲೆಯ ಮತ್ತು ಪೋಷಕರ ವತಿಯಿಂದ ಬೀಳ್ಕೊಡುವ ಕಾರ್ಯಕ್ರಮ ನೆರವೇರಿತು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪೋಷಕ ಸಂಘದ ಅಧ್ಯಕ್ಷ ವಿಶ್ವನಾಥ ವಹಿಸಿದ್ದರು. ಸಭೆಯಲ್ಲಿ ಮುಖ್ಯ ಅಥಿತಿಯಾಗಿ ಶಾಲಾ ನಿವೃತ್ತ ಶಿಕ್ಷಕಿ ಶೇಷಮ್ಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್, ಮುಖ್ಯ ಗುರುಗಳಾದ ಮಾಧವ, ಪೋಷಕರ ಸಂಘದ ಉಪಾಧ್ಯಕ್ಷೆ ಪವಿತ್ರ, ಶಾಲಾ ನಾಯಕಿ ವೈಷ್ಣವಿ, ನಿವೃತ್ತರಾದ ವಾಸು ಅವರ ಧರ್ಮಪತ್ನಿ ವಿನೋದ ಉಪಸ್ಥಿತರಿದ್ದರು. ನಿವೃತ್ತ ವಾಸು ದಂಪತಿಗಳನ್ನು ಶಾಲೆ ಮತ್ತು ಪೊಷಕರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತರ ಕಿರು ಪರಿಚಯವನ್ನು ಶಾಲಾ ಶಿಕ್ಷಕಿ ಗೀತಾರವರು ವಾಚಿಸಿದರು.

ಅಲೆಟ್ಟಿ ಸೊಸೈಟಿ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಮ ಆಲೆಟ್ಟಿ ಹಾಗೂ ಪೋಷಕರ ಪರವಾಗಿ ಶ್ರೀಧರ ಮಾಣಿಮರ್ಧು, ವಿದ್ಯಾರ್ಥಿಗಳಾದ ವೈಷ್ಣವಿ, ಪೂರ್ವಿತಾ, ವೀಕ್ಷಿತಾ, ಸಂತೋಷ್, ಗುರುಪ್ರಸಾದ್ ,ನೂತನ್, ತುಷಾರ್ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು, ಹಳೆವಿಧ್ಯಾರ್ಥಿಗಳು, ಊರ ಅಭಿಮಾನಿಗಳು ಕಿರುಕಾಣಿಕೆ ನೀಡಿ ಹಾರ ಹಾಕಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮೋನಿಕಾ ಮತ್ತು ಕಾವ್ಯಾಂಜಲಿ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಮಾಧವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶ್ರೀಧರ ಮಾಣಿಮರ್ಧು ವಂದಿಸಿ, ಶಾಲಾ ಸಹಶಿಕ್ಷಕಿ ಹೇಮಲತಾ ಮತ್ತು ಪಂಚಾಯತ್ ಸಿಬ್ಬಂದಿ ಸೀತಾರಾಮ ಮೊರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭೂಮಿಗೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್‌ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…

3 hours ago

ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ವ್ಯವಸ್ಥೆಗೆ ಕ್ರಮ

ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…

3 hours ago

ಹೃದಯಾಘಾತದಿಂದ ಸಾವುಗಳ ಸಂಖ್ಯೆ ಹೆಚ್ಚಾಗಿಲ್ಲ | ಯಾವುದೇ ಆತಂಕ ಬೇಡ – ಸಚಿವ ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…

3 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆ | ತುಂಬಿ ಹರಿಯುತ್ತಿರುವ ನದಿಗಳು

ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…

3 hours ago

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

18 hours ago