Advertisement
ಕಾರ್ಯಕ್ರಮಗಳು

ಅಲೆಟ್ಟಿ ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ವಾಸುರವರಿಗೆ ಬೀಳ್ಕೊಡುಗೆ

Share

ಆಲೆಟ್ಟಿ: ಆಲೆಟ್ಟಿ ಸರಕಾರಿ ಆಶ್ರಮ ಶಾಲೆಯಲ್ಲಿ ಪೆಬ್ರವರಿ 1 ರಂದು ಅಡುಗೆ ಸಿಬ್ಬಂದಿಯಾಗಿ ಸುಮಾರು 28 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಾಸು ಡಿ ರವರಿಗೆ ಶಾಲೆಯ ಮತ್ತು ಪೋಷಕರ ವತಿಯಿಂದ ಬೀಳ್ಕೊಡುವ ಕಾರ್ಯಕ್ರಮ ನೆರವೇರಿತು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪೋಷಕ ಸಂಘದ ಅಧ್ಯಕ್ಷ ವಿಶ್ವನಾಥ ವಹಿಸಿದ್ದರು. ಸಭೆಯಲ್ಲಿ ಮುಖ್ಯ ಅಥಿತಿಯಾಗಿ ಶಾಲಾ ನಿವೃತ್ತ ಶಿಕ್ಷಕಿ ಶೇಷಮ್ಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್, ಮುಖ್ಯ ಗುರುಗಳಾದ ಮಾಧವ, ಪೋಷಕರ ಸಂಘದ ಉಪಾಧ್ಯಕ್ಷೆ ಪವಿತ್ರ, ಶಾಲಾ ನಾಯಕಿ ವೈಷ್ಣವಿ, ನಿವೃತ್ತರಾದ ವಾಸು ಅವರ ಧರ್ಮಪತ್ನಿ ವಿನೋದ ಉಪಸ್ಥಿತರಿದ್ದರು. ನಿವೃತ್ತ ವಾಸು ದಂಪತಿಗಳನ್ನು ಶಾಲೆ ಮತ್ತು ಪೊಷಕರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತರ ಕಿರು ಪರಿಚಯವನ್ನು ಶಾಲಾ ಶಿಕ್ಷಕಿ ಗೀತಾರವರು ವಾಚಿಸಿದರು.

ಅಲೆಟ್ಟಿ ಸೊಸೈಟಿ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಮ ಆಲೆಟ್ಟಿ ಹಾಗೂ ಪೋಷಕರ ಪರವಾಗಿ ಶ್ರೀಧರ ಮಾಣಿಮರ್ಧು, ವಿದ್ಯಾರ್ಥಿಗಳಾದ ವೈಷ್ಣವಿ, ಪೂರ್ವಿತಾ, ವೀಕ್ಷಿತಾ, ಸಂತೋಷ್, ಗುರುಪ್ರಸಾದ್ ,ನೂತನ್, ತುಷಾರ್ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು, ಹಳೆವಿಧ್ಯಾರ್ಥಿಗಳು, ಊರ ಅಭಿಮಾನಿಗಳು ಕಿರುಕಾಣಿಕೆ ನೀಡಿ ಹಾರ ಹಾಕಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮೋನಿಕಾ ಮತ್ತು ಕಾವ್ಯಾಂಜಲಿ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಮಾಧವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶ್ರೀಧರ ಮಾಣಿಮರ್ಧು ವಂದಿಸಿ, ಶಾಲಾ ಸಹಶಿಕ್ಷಕಿ ಹೇಮಲತಾ ಮತ್ತು ಪಂಚಾಯತ್ ಸಿಬ್ಬಂದಿ ಸೀತಾರಾಮ ಮೊರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

6 minutes ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

6 hours ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

17 hours ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

17 hours ago

ಹವಾಮಾನ ವರದಿ | 25-04-2026 | ಕರಾವಳಿ, ಮಲೆನಾಡಿನಲ್ಲಿ ಗುಡುಗು ಮಳೆ – ಮಳೆ ಹೆಚ್ಚಳ ಯಾವಾಗಿನಿಂದ…?

ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…

23 hours ago

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ

ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…

2 days ago