Advertisement
ಕಾರ್ಯಕ್ರಮಗಳು

ಅಲೆಟ್ಟಿ ಆಶ್ರಮ ಶಾಲೆಯಲ್ಲಿ ಅಡುಗೆ ಸಿಬ್ಬಂದಿ ವಾಸುರವರಿಗೆ ಬೀಳ್ಕೊಡುಗೆ

Share

ಆಲೆಟ್ಟಿ: ಆಲೆಟ್ಟಿ ಸರಕಾರಿ ಆಶ್ರಮ ಶಾಲೆಯಲ್ಲಿ ಪೆಬ್ರವರಿ 1 ರಂದು ಅಡುಗೆ ಸಿಬ್ಬಂದಿಯಾಗಿ ಸುಮಾರು 28 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಾಸು ಡಿ ರವರಿಗೆ ಶಾಲೆಯ ಮತ್ತು ಪೋಷಕರ ವತಿಯಿಂದ ಬೀಳ್ಕೊಡುವ ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪೋಷಕ ಸಂಘದ ಅಧ್ಯಕ್ಷ ವಿಶ್ವನಾಥ ವಹಿಸಿದ್ದರು. ಸಭೆಯಲ್ಲಿ ಮುಖ್ಯ ಅಥಿತಿಯಾಗಿ ಶಾಲಾ ನಿವೃತ್ತ ಶಿಕ್ಷಕಿ ಶೇಷಮ್ಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್, ಮುಖ್ಯ ಗುರುಗಳಾದ ಮಾಧವ, ಪೋಷಕರ ಸಂಘದ ಉಪಾಧ್ಯಕ್ಷೆ ಪವಿತ್ರ, ಶಾಲಾ ನಾಯಕಿ ವೈಷ್ಣವಿ, ನಿವೃತ್ತರಾದ ವಾಸು ಅವರ ಧರ್ಮಪತ್ನಿ ವಿನೋದ ಉಪಸ್ಥಿತರಿದ್ದರು. ನಿವೃತ್ತ ವಾಸು ದಂಪತಿಗಳನ್ನು ಶಾಲೆ ಮತ್ತು ಪೊಷಕರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತರ ಕಿರು ಪರಿಚಯವನ್ನು ಶಾಲಾ ಶಿಕ್ಷಕಿ ಗೀತಾರವರು ವಾಚಿಸಿದರು.

ಅಲೆಟ್ಟಿ ಸೊಸೈಟಿ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಮ ಆಲೆಟ್ಟಿ ಹಾಗೂ ಪೋಷಕರ ಪರವಾಗಿ ಶ್ರೀಧರ ಮಾಣಿಮರ್ಧು, ವಿದ್ಯಾರ್ಥಿಗಳಾದ ವೈಷ್ಣವಿ, ಪೂರ್ವಿತಾ, ವೀಕ್ಷಿತಾ, ಸಂತೋಷ್, ಗುರುಪ್ರಸಾದ್ ,ನೂತನ್, ತುಷಾರ್ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು, ಹಳೆವಿಧ್ಯಾರ್ಥಿಗಳು, ಊರ ಅಭಿಮಾನಿಗಳು ಕಿರುಕಾಣಿಕೆ ನೀಡಿ ಹಾರ ಹಾಕಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮೋನಿಕಾ ಮತ್ತು ಕಾವ್ಯಾಂಜಲಿ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಮಾಧವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶ್ರೀಧರ ಮಾಣಿಮರ್ಧು ವಂದಿಸಿ, ಶಾಲಾ ಸಹಶಿಕ್ಷಕಿ ಹೇಮಲತಾ ಮತ್ತು ಪಂಚಾಯತ್ ಸಿಬ್ಬಂದಿ ಸೀತಾರಾಮ ಮೊರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

21 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

21 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

22 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago