ಆಲೆಟ್ಟಿ: ಆಲೆಟ್ಟಿ ಸರಕಾರಿ ಆಶ್ರಮ ಶಾಲೆಯಲ್ಲಿ ಪೆಬ್ರವರಿ 1 ರಂದು ಅಡುಗೆ ಸಿಬ್ಬಂದಿಯಾಗಿ ಸುಮಾರು 28 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ವಾಸು ಡಿ ರವರಿಗೆ ಶಾಲೆಯ ಮತ್ತು ಪೋಷಕರ ವತಿಯಿಂದ ಬೀಳ್ಕೊಡುವ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಪೋಷಕ ಸಂಘದ ಅಧ್ಯಕ್ಷ ವಿಶ್ವನಾಥ ವಹಿಸಿದ್ದರು. ಸಭೆಯಲ್ಲಿ ಮುಖ್ಯ ಅಥಿತಿಯಾಗಿ ಶಾಲಾ ನಿವೃತ್ತ ಶಿಕ್ಷಕಿ ಶೇಷಮ್ಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೀರ್ತಿಪ್ರಸಾದ್, ಮುಖ್ಯ ಗುರುಗಳಾದ ಮಾಧವ, ಪೋಷಕರ ಸಂಘದ ಉಪಾಧ್ಯಕ್ಷೆ ಪವಿತ್ರ, ಶಾಲಾ ನಾಯಕಿ ವೈಷ್ಣವಿ, ನಿವೃತ್ತರಾದ ವಾಸು ಅವರ ಧರ್ಮಪತ್ನಿ ವಿನೋದ ಉಪಸ್ಥಿತರಿದ್ದರು. ನಿವೃತ್ತ ವಾಸು ದಂಪತಿಗಳನ್ನು ಶಾಲೆ ಮತ್ತು ಪೊಷಕರ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನಿತರ ಕಿರು ಪರಿಚಯವನ್ನು ಶಾಲಾ ಶಿಕ್ಷಕಿ ಗೀತಾರವರು ವಾಚಿಸಿದರು.
ಅಲೆಟ್ಟಿ ಸೊಸೈಟಿ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಮ ಆಲೆಟ್ಟಿ ಹಾಗೂ ಪೋಷಕರ ಪರವಾಗಿ ಶ್ರೀಧರ ಮಾಣಿಮರ್ಧು, ವಿದ್ಯಾರ್ಥಿಗಳಾದ ವೈಷ್ಣವಿ, ಪೂರ್ವಿತಾ, ವೀಕ್ಷಿತಾ, ಸಂತೋಷ್, ಗುರುಪ್ರಸಾದ್ ,ನೂತನ್, ತುಷಾರ್ ಅನಿಸಿಕೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಕ್ಕಳ ಪೋಷಕರು, ಹಳೆವಿಧ್ಯಾರ್ಥಿಗಳು, ಊರ ಅಭಿಮಾನಿಗಳು ಕಿರುಕಾಣಿಕೆ ನೀಡಿ ಹಾರ ಹಾಕಿ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಾದ ಮೋನಿಕಾ ಮತ್ತು ಕಾವ್ಯಾಂಜಲಿ ಪ್ರಾರ್ಥಿಸಿದರು. ಮುಖ್ಯ ಗುರುಗಳಾದ ಮಾಧವರು ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಶ್ರೀಧರ ಮಾಣಿಮರ್ಧು ವಂದಿಸಿ, ಶಾಲಾ ಸಹಶಿಕ್ಷಕಿ ಹೇಮಲತಾ ಮತ್ತು ಪಂಚಾಯತ್ ಸಿಬ್ಬಂದಿ ಸೀತಾರಾಮ ಮೊರಂಗಲ್ಲು ಕಾರ್ಯಕ್ರಮ ನಿರೂಪಿಸಿದರು.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…