Advertisement
ಸುದ್ದಿಗಳು

ಅಲ್ ಅಮೀನ್ ಪೆರುವಾಯಿ (ಯುಎಇ) 5 ನೇ ವಾರ್ಷಿಕೋತ್ಸವ

Share
ದುಬೈ: ಬಡಹೆಣ್ಣು ಮಕ್ಕಳ ವಿವಾಹಕ್ಕೆ ಸಹಕಾರ, ಸೂರಿಲ್ಲದ ನಿರ್ಗತಿಕ ಕುಟುಂಬ ಕ್ಕೆ ಆಶ್ರಯ ಕಲ್ಪಿಸುವ, ಶೈಕ್ಷಣಿಕ ಪ್ರೋತ್ಸಾಹ ,  ಹೀಗೆ ಹಲವಾರು ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು, ಪೆರುವಾಯಿ ನಾಡಿನ ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ನಿರಂತರ ಸೇವೆ ಗಯ್ಯುತ್ತಿರುವ, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿರುವ ಪೆರುವಾಯಿ ನಾಡಿನ ಅನಿವಾಸಿ ಭಾರತೀಯ ಸಹೃದಯಗಳು ಒಟ್ಟು ಸೇರಿಕೊಂಡು ರಚಿಸಿದ ಅಲ್ ಅಮೀನ್ ಪೆರುವಾಯಿ ಯುಎಇ ಸಮಿತಿಗೆ ಐದು ವರುಷ ತುಂಬಿದ ಸಂಭ್ರಮ ಹೊಸ್ತಿಲಲ್ಲಿದೆ .
ಸಮಿತಿಯ ವಾರ್ಷಿಕ ಮಹಾ ಸಂಭ್ರಮ ಹಾಗೂ ಈದ್ ಸಂಭ್ರಮ ಶಾರ್ಜಾ ಆಡಿಟೋರಿಯಂ ದುಬೈನಲ್ಲಿ ನಡೆಯಿತು . ಸಮಿತಿಯ ಹಮೀದ್ ಬದಿಯಡ್ಕ ಪೆರುವಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು . ಹಮೀದ್ ಕುಂಬ್ಳೆ ಪೆರುವಾಯಿ, ಅಝೀಜ್   ಮುಚ್ಚಿರಪದವು  , ಶಾಫಿ  ಮುಚ್ಚಿರಪದವು ,ಶಾಫಿ ಕಾನ ಹಾಗೂ ಮೂಸ ಸೇನೆರಪಾಲು ಮುಖ್ಯ ಅತಿಥಿಗಳಾಗಿದ್ದರು .
ಮಾನವೀಯ ಮೌಲ್ಯಗಲಿಗೆ ಪ್ರೋತ್ಸಾಹಿಸುತ್ತ, ಸಮಿತಿಯು ಮುಂದಿನ ಒಂದು ವರ್ಷ ದಲ್ಲಿ ಕೈಗೊಳ್ಳಬೇಕಾದ ಸಮುದಾಯ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳ ಕ್ರಿಯಾ ಯೋಜನೆಯನ್ನು ಈ ಸಂದರ್ಭದಲ್ಲಿ  ತಯಾರಿಸಲಾಯಿತು.
ನೂತನ ಪದಾಧಿಕಾರಿಗಳ ಆಯ್ಕೆ :
2019-20 ನೇ ಸಾಲಿನ ನೂತನ  ಅಧ್ಯಕ್ಷರಾಗಿ ರಶೀದ್ ಸೇನೆರಪಾಲು , ಗೌರವಾಧ್ಯಕ್ಷ ರಾಗಿ ಹಮೀದ್ ಬದಿಯಡ್ಕ, ಉಪಾಧ್ಯ ಕ್ಷ ರಾಗಿ ರಫೀಕ್ ಕದ್ರಡ್ಕ ,  ಪ್ರದಾನ ಕಾರ್ಯ ದರ್ಶಿಯಾಗಿ ಸಮೀರ್ ದರ್ಖಾಸ್  ಪೆರುವಾಯಿ, ಜೊತೆ ಕಾರ್ಯದರ್ಶಿ ಯಾಗಿ ರಿಯಾಜ್  ಮುಚ್ಚಿರಪದವು  ಹಾಗೂ ಹನೀಫ್ ಕಡಂಬಿಲ ಹಾಗೂ ಕೋಶಾಧಿಕಾರಿ ಯಾಗಿ ಶರೀಫ್  ಮುಚ್ಚಿರಪದವು  ಇವರುಗಳು ಆಯ್ಕೆ ಗೊಂಡು ,ಕಾರ್ಯಕಾರಿ ಸಮಿತಿಗಳನ್ನು ಒಳಗೊಂಡ ಕಮಿಟಿ ರಚನೆ ಗೊಂಡಿತು .
ರಶೀದ್ ಪೆರುವಾಯಿ ಸ್ವಾಗತಿಸಿ , ಸಿದ್ದೀಕ್ ಕಾನ ಧನ್ಯವಾದ ಗೈದರು . ಅಶ್ರಫ್ ಮುಚಿರಪದವು ಕಾರ್ಯಕ್ರಮ ನಿರೂಪಿಸಿದರು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 hour ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

7 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

12 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

12 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

24 hours ago