Advertisement
ಅನುಕ್ರಮ

ಅವಳು ಬದುಕುತ್ತಿದ್ದಾಳೆ

Share
ಅವಳು ಬದುಕುತಿದ್ದಾಳೆ
ಅವಳಿಗಾಗಿ ಅಲ್ಲ…..
ಕಷ್ಟದ ಕದ ತೆರೆದಿದೆ
ಸಹನೆಯ ಕಟ್ಟೆಯೊಡೆದಿದೆ..
ಈ ಬದುಕು ಅವಳಿಗಾಗಿ ಅಲ್ಲ…!
ಕರಿಮಣ್ಣ ಹಗಲಿರುಳು ಹದ ಮಾಡುತಿಹಳು
ಹೊನ್ನ ಬೆಳೆಯ ಕಾಣುವಾಸೆಯಲಿ
ಆಸರೆಗೊಂದು ಸೂರು,ಹಸಿವಿಗಾಗಿ ಅನ್ನ
ಇನ್ನೇನು ಕಂಡವಳಲ್ಲ ಅವಳು
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತುಸು ವಿಶ್ರಾಂತಿಯಿರದ ಬದುಕಲಿ ನೆಮ್ಮದಿಯು ಕನಸು
ಮರೆಮಾಚಿಹಳು ಸೆರಗಿನ ಮರೆಯಲ್ಲಿ ಕಣ್ಣೀರು
ಕಾಲಿಗೆ ಚಕ್ರ ಕಟ್ಟಿಕೊಂಡವಳಂತೆ
ಹಗಲಿರುಳ ದುಡಿಮೆಯೇ ಅವಳ ಬದುಕು..
ನಿಜ!ಅವಳ ಬದುಕು ಅವಳಿಗಾಗಿ ಅಲ್ಲ..
ತನ್ನೊಡನೆ ಸಪ್ತಪದಿಯ ತುಳಿದಾತ.
ಕಷ್ಟದಲಿ ಜೊತೆಯಿರುವೆನೆಂದು ವಚನ ಗೈದಾತ
ಸುಖವ ಅರಸಿ ಬಂದಾಕೆಗೆ ಕಷ್ಟದ ಬಾಗಿಲನು ತೆರೆದಾತ ಅವನೊಬ್ಬ ಹೆಂಡಕುಡುಕ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ಅವರಿವರ ಚುಚ್ಚುಮಾತಿಗೆ ಕಿವಿಮುಚ್ಚಿ
ಗಂಡನ ಕುಡುಕತನದಾಟಕ್ಕೆ ಸೋತು ಕುಸಿಯದೆ
ಸೆರಗ ಮರೆಯಲ್ಲಿ ಮಕ್ಕಳ ಮರೆಮಾಚಿ ಸನ್ಮಾರ್ಗದಿ ನಡೆಸಿದಾಕೆ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತಂದೆಯಾದವ ಜವಬ್ಧಾರಿ ಮರೆತಾಗ
ಹೆಂಡಕುಡಿವುದೊಂದೇ ನಿತ್ಯ ಕಾಯಕ ಎಂದಾಗ
ತನ್ನುದರದ ಕುಡಿಗಳಿಗಾಗಿ ಬದುಕ ಸವೆಸಿದಾಕೆ…
ತನ್ನ ಕನಸುಗಳ ಕೊಂದು ಬದುಕಿದಾಕೆ
ನಿಜ! ಅವಳ ಬದುಕು  ಅವಳಿಗಾಗಿ ಅಲ್ಲ…..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

22 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

22 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

22 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

23 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago