Advertisement
ಅನುಕ್ರಮ

ಅವಳು ಬದುಕುತ್ತಿದ್ದಾಳೆ

Share
ಅವಳು ಬದುಕುತಿದ್ದಾಳೆ
ಅವಳಿಗಾಗಿ ಅಲ್ಲ…..
ಕಷ್ಟದ ಕದ ತೆರೆದಿದೆ
ಸಹನೆಯ ಕಟ್ಟೆಯೊಡೆದಿದೆ..
ಈ ಬದುಕು ಅವಳಿಗಾಗಿ ಅಲ್ಲ…!
ಕರಿಮಣ್ಣ ಹಗಲಿರುಳು ಹದ ಮಾಡುತಿಹಳು
ಹೊನ್ನ ಬೆಳೆಯ ಕಾಣುವಾಸೆಯಲಿ
ಆಸರೆಗೊಂದು ಸೂರು,ಹಸಿವಿಗಾಗಿ ಅನ್ನ
ಇನ್ನೇನು ಕಂಡವಳಲ್ಲ ಅವಳು
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತುಸು ವಿಶ್ರಾಂತಿಯಿರದ ಬದುಕಲಿ ನೆಮ್ಮದಿಯು ಕನಸು
ಮರೆಮಾಚಿಹಳು ಸೆರಗಿನ ಮರೆಯಲ್ಲಿ ಕಣ್ಣೀರು
ಕಾಲಿಗೆ ಚಕ್ರ ಕಟ್ಟಿಕೊಂಡವಳಂತೆ
ಹಗಲಿರುಳ ದುಡಿಮೆಯೇ ಅವಳ ಬದುಕು..
ನಿಜ!ಅವಳ ಬದುಕು ಅವಳಿಗಾಗಿ ಅಲ್ಲ..
ತನ್ನೊಡನೆ ಸಪ್ತಪದಿಯ ತುಳಿದಾತ.
ಕಷ್ಟದಲಿ ಜೊತೆಯಿರುವೆನೆಂದು ವಚನ ಗೈದಾತ
ಸುಖವ ಅರಸಿ ಬಂದಾಕೆಗೆ ಕಷ್ಟದ ಬಾಗಿಲನು ತೆರೆದಾತ ಅವನೊಬ್ಬ ಹೆಂಡಕುಡುಕ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ಅವರಿವರ ಚುಚ್ಚುಮಾತಿಗೆ ಕಿವಿಮುಚ್ಚಿ
ಗಂಡನ ಕುಡುಕತನದಾಟಕ್ಕೆ ಸೋತು ಕುಸಿಯದೆ
ಸೆರಗ ಮರೆಯಲ್ಲಿ ಮಕ್ಕಳ ಮರೆಮಾಚಿ ಸನ್ಮಾರ್ಗದಿ ನಡೆಸಿದಾಕೆ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತಂದೆಯಾದವ ಜವಬ್ಧಾರಿ ಮರೆತಾಗ
ಹೆಂಡಕುಡಿವುದೊಂದೇ ನಿತ್ಯ ಕಾಯಕ ಎಂದಾಗ
ತನ್ನುದರದ ಕುಡಿಗಳಿಗಾಗಿ ಬದುಕ ಸವೆಸಿದಾಕೆ…
ತನ್ನ ಕನಸುಗಳ ಕೊಂದು ಬದುಕಿದಾಕೆ
ನಿಜ! ಅವಳ ಬದುಕು  ಅವಳಿಗಾಗಿ ಅಲ್ಲ…..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

6 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

6 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

15 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

22 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

1 day ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

1 day ago