Advertisement
ಅನುಕ್ರಮ

ಅವಳು ಬದುಕುತ್ತಿದ್ದಾಳೆ

Share
ಅವಳು ಬದುಕುತಿದ್ದಾಳೆ
ಅವಳಿಗಾಗಿ ಅಲ್ಲ…..
ಕಷ್ಟದ ಕದ ತೆರೆದಿದೆ
ಸಹನೆಯ ಕಟ್ಟೆಯೊಡೆದಿದೆ..
ಈ ಬದುಕು ಅವಳಿಗಾಗಿ ಅಲ್ಲ…!
ಕರಿಮಣ್ಣ ಹಗಲಿರುಳು ಹದ ಮಾಡುತಿಹಳು
ಹೊನ್ನ ಬೆಳೆಯ ಕಾಣುವಾಸೆಯಲಿ
ಆಸರೆಗೊಂದು ಸೂರು,ಹಸಿವಿಗಾಗಿ ಅನ್ನ
ಇನ್ನೇನು ಕಂಡವಳಲ್ಲ ಅವಳು
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತುಸು ವಿಶ್ರಾಂತಿಯಿರದ ಬದುಕಲಿ ನೆಮ್ಮದಿಯು ಕನಸು
ಮರೆಮಾಚಿಹಳು ಸೆರಗಿನ ಮರೆಯಲ್ಲಿ ಕಣ್ಣೀರು
ಕಾಲಿಗೆ ಚಕ್ರ ಕಟ್ಟಿಕೊಂಡವಳಂತೆ
ಹಗಲಿರುಳ ದುಡಿಮೆಯೇ ಅವಳ ಬದುಕು..
ನಿಜ!ಅವಳ ಬದುಕು ಅವಳಿಗಾಗಿ ಅಲ್ಲ..
ತನ್ನೊಡನೆ ಸಪ್ತಪದಿಯ ತುಳಿದಾತ.
ಕಷ್ಟದಲಿ ಜೊತೆಯಿರುವೆನೆಂದು ವಚನ ಗೈದಾತ
ಸುಖವ ಅರಸಿ ಬಂದಾಕೆಗೆ ಕಷ್ಟದ ಬಾಗಿಲನು ತೆರೆದಾತ ಅವನೊಬ್ಬ ಹೆಂಡಕುಡುಕ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ಅವರಿವರ ಚುಚ್ಚುಮಾತಿಗೆ ಕಿವಿಮುಚ್ಚಿ
ಗಂಡನ ಕುಡುಕತನದಾಟಕ್ಕೆ ಸೋತು ಕುಸಿಯದೆ
ಸೆರಗ ಮರೆಯಲ್ಲಿ ಮಕ್ಕಳ ಮರೆಮಾಚಿ ಸನ್ಮಾರ್ಗದಿ ನಡೆಸಿದಾಕೆ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತಂದೆಯಾದವ ಜವಬ್ಧಾರಿ ಮರೆತಾಗ
ಹೆಂಡಕುಡಿವುದೊಂದೇ ನಿತ್ಯ ಕಾಯಕ ಎಂದಾಗ
ತನ್ನುದರದ ಕುಡಿಗಳಿಗಾಗಿ ಬದುಕ ಸವೆಸಿದಾಕೆ…
ತನ್ನ ಕನಸುಗಳ ಕೊಂದು ಬದುಕಿದಾಕೆ
ನಿಜ! ಅವಳ ಬದುಕು  ಅವಳಿಗಾಗಿ ಅಲ್ಲ…..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago