Advertisement
ಅನುಕ್ರಮ

ಅವಳು ಬದುಕುತ್ತಿದ್ದಾಳೆ

Share
ಅವಳು ಬದುಕುತಿದ್ದಾಳೆ
ಅವಳಿಗಾಗಿ ಅಲ್ಲ…..
ಕಷ್ಟದ ಕದ ತೆರೆದಿದೆ
ಸಹನೆಯ ಕಟ್ಟೆಯೊಡೆದಿದೆ..
ಈ ಬದುಕು ಅವಳಿಗಾಗಿ ಅಲ್ಲ…!
ಕರಿಮಣ್ಣ ಹಗಲಿರುಳು ಹದ ಮಾಡುತಿಹಳು
ಹೊನ್ನ ಬೆಳೆಯ ಕಾಣುವಾಸೆಯಲಿ
ಆಸರೆಗೊಂದು ಸೂರು,ಹಸಿವಿಗಾಗಿ ಅನ್ನ
ಇನ್ನೇನು ಕಂಡವಳಲ್ಲ ಅವಳು
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತುಸು ವಿಶ್ರಾಂತಿಯಿರದ ಬದುಕಲಿ ನೆಮ್ಮದಿಯು ಕನಸು
ಮರೆಮಾಚಿಹಳು ಸೆರಗಿನ ಮರೆಯಲ್ಲಿ ಕಣ್ಣೀರು
ಕಾಲಿಗೆ ಚಕ್ರ ಕಟ್ಟಿಕೊಂಡವಳಂತೆ
ಹಗಲಿರುಳ ದುಡಿಮೆಯೇ ಅವಳ ಬದುಕು..
ನಿಜ!ಅವಳ ಬದುಕು ಅವಳಿಗಾಗಿ ಅಲ್ಲ..
ತನ್ನೊಡನೆ ಸಪ್ತಪದಿಯ ತುಳಿದಾತ.
ಕಷ್ಟದಲಿ ಜೊತೆಯಿರುವೆನೆಂದು ವಚನ ಗೈದಾತ
ಸುಖವ ಅರಸಿ ಬಂದಾಕೆಗೆ ಕಷ್ಟದ ಬಾಗಿಲನು ತೆರೆದಾತ ಅವನೊಬ್ಬ ಹೆಂಡಕುಡುಕ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ಅವರಿವರ ಚುಚ್ಚುಮಾತಿಗೆ ಕಿವಿಮುಚ್ಚಿ
ಗಂಡನ ಕುಡುಕತನದಾಟಕ್ಕೆ ಸೋತು ಕುಸಿಯದೆ
ಸೆರಗ ಮರೆಯಲ್ಲಿ ಮಕ್ಕಳ ಮರೆಮಾಚಿ ಸನ್ಮಾರ್ಗದಿ ನಡೆಸಿದಾಕೆ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತಂದೆಯಾದವ ಜವಬ್ಧಾರಿ ಮರೆತಾಗ
ಹೆಂಡಕುಡಿವುದೊಂದೇ ನಿತ್ಯ ಕಾಯಕ ಎಂದಾಗ
ತನ್ನುದರದ ಕುಡಿಗಳಿಗಾಗಿ ಬದುಕ ಸವೆಸಿದಾಕೆ…
ತನ್ನ ಕನಸುಗಳ ಕೊಂದು ಬದುಕಿದಾಕೆ
ನಿಜ! ಅವಳ ಬದುಕು  ಅವಳಿಗಾಗಿ ಅಲ್ಲ…..
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

6 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

8 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

9 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago