Advertisement
ಅನುಕ್ರಮ

ಅವಳು ಬದುಕುತ್ತಿದ್ದಾಳೆ

Share
ಅವಳು ಬದುಕುತಿದ್ದಾಳೆ
ಅವಳಿಗಾಗಿ ಅಲ್ಲ…..
ಕಷ್ಟದ ಕದ ತೆರೆದಿದೆ
ಸಹನೆಯ ಕಟ್ಟೆಯೊಡೆದಿದೆ..
ಈ ಬದುಕು ಅವಳಿಗಾಗಿ ಅಲ್ಲ…!
ಕರಿಮಣ್ಣ ಹಗಲಿರುಳು ಹದ ಮಾಡುತಿಹಳು
ಹೊನ್ನ ಬೆಳೆಯ ಕಾಣುವಾಸೆಯಲಿ
ಆಸರೆಗೊಂದು ಸೂರು,ಹಸಿವಿಗಾಗಿ ಅನ್ನ
ಇನ್ನೇನು ಕಂಡವಳಲ್ಲ ಅವಳು
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತುಸು ವಿಶ್ರಾಂತಿಯಿರದ ಬದುಕಲಿ ನೆಮ್ಮದಿಯು ಕನಸು
ಮರೆಮಾಚಿಹಳು ಸೆರಗಿನ ಮರೆಯಲ್ಲಿ ಕಣ್ಣೀರು
ಕಾಲಿಗೆ ಚಕ್ರ ಕಟ್ಟಿಕೊಂಡವಳಂತೆ
ಹಗಲಿರುಳ ದುಡಿಮೆಯೇ ಅವಳ ಬದುಕು..
ನಿಜ!ಅವಳ ಬದುಕು ಅವಳಿಗಾಗಿ ಅಲ್ಲ..
ತನ್ನೊಡನೆ ಸಪ್ತಪದಿಯ ತುಳಿದಾತ.
ಕಷ್ಟದಲಿ ಜೊತೆಯಿರುವೆನೆಂದು ವಚನ ಗೈದಾತ
ಸುಖವ ಅರಸಿ ಬಂದಾಕೆಗೆ ಕಷ್ಟದ ಬಾಗಿಲನು ತೆರೆದಾತ ಅವನೊಬ್ಬ ಹೆಂಡಕುಡುಕ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ಅವರಿವರ ಚುಚ್ಚುಮಾತಿಗೆ ಕಿವಿಮುಚ್ಚಿ
ಗಂಡನ ಕುಡುಕತನದಾಟಕ್ಕೆ ಸೋತು ಕುಸಿಯದೆ
ಸೆರಗ ಮರೆಯಲ್ಲಿ ಮಕ್ಕಳ ಮರೆಮಾಚಿ ಸನ್ಮಾರ್ಗದಿ ನಡೆಸಿದಾಕೆ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತಂದೆಯಾದವ ಜವಬ್ಧಾರಿ ಮರೆತಾಗ
ಹೆಂಡಕುಡಿವುದೊಂದೇ ನಿತ್ಯ ಕಾಯಕ ಎಂದಾಗ
ತನ್ನುದರದ ಕುಡಿಗಳಿಗಾಗಿ ಬದುಕ ಸವೆಸಿದಾಕೆ…
ತನ್ನ ಕನಸುಗಳ ಕೊಂದು ಬದುಕಿದಾಕೆ
ನಿಜ! ಅವಳ ಬದುಕು  ಅವಳಿಗಾಗಿ ಅಲ್ಲ…..
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

1 day ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago