Advertisement
ಅಂಕಣ

ಅವಳು ಬದುಕುತ್ತಿದ್ದಾಳೆ

Share
ಅವಳು ಬದುಕುತಿದ್ದಾಳೆ
ಅವಳಿಗಾಗಿ ಅಲ್ಲ…..
ಕಷ್ಟದ ಕದ ತೆರೆದಿದೆ
ಸಹನೆಯ ಕಟ್ಟೆಯೊಡೆದಿದೆ..
ಈ ಬದುಕು ಅವಳಿಗಾಗಿ ಅಲ್ಲ…!
ಕರಿಮಣ್ಣ ಹಗಲಿರುಳು ಹದ ಮಾಡುತಿಹಳು
ಹೊನ್ನ ಬೆಳೆಯ ಕಾಣುವಾಸೆಯಲಿ
ಆಸರೆಗೊಂದು ಸೂರು,ಹಸಿವಿಗಾಗಿ ಅನ್ನ
ಇನ್ನೇನು ಕಂಡವಳಲ್ಲ ಅವಳು
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತುಸು ವಿಶ್ರಾಂತಿಯಿರದ ಬದುಕಲಿ ನೆಮ್ಮದಿಯು ಕನಸು
ಮರೆಮಾಚಿಹಳು ಸೆರಗಿನ ಮರೆಯಲ್ಲಿ ಕಣ್ಣೀರು
ಕಾಲಿಗೆ ಚಕ್ರ ಕಟ್ಟಿಕೊಂಡವಳಂತೆ
ಹಗಲಿರುಳ ದುಡಿಮೆಯೇ ಅವಳ ಬದುಕು..
ನಿಜ!ಅವಳ ಬದುಕು ಅವಳಿಗಾಗಿ ಅಲ್ಲ..
ತನ್ನೊಡನೆ ಸಪ್ತಪದಿಯ ತುಳಿದಾತ.
ಕಷ್ಟದಲಿ ಜೊತೆಯಿರುವೆನೆಂದು ವಚನ ಗೈದಾತ
ಸುಖವ ಅರಸಿ ಬಂದಾಕೆಗೆ ಕಷ್ಟದ ಬಾಗಿಲನು ತೆರೆದಾತ ಅವನೊಬ್ಬ ಹೆಂಡಕುಡುಕ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ಅವರಿವರ ಚುಚ್ಚುಮಾತಿಗೆ ಕಿವಿಮುಚ್ಚಿ
ಗಂಡನ ಕುಡುಕತನದಾಟಕ್ಕೆ ಸೋತು ಕುಸಿಯದೆ
ಸೆರಗ ಮರೆಯಲ್ಲಿ ಮಕ್ಕಳ ಮರೆಮಾಚಿ ಸನ್ಮಾರ್ಗದಿ ನಡೆಸಿದಾಕೆ
ನಿಜ!ಈ ಬದುಕು ಅವಳಿಗಾಗಿ ಅಲ್ಲ
ತಂದೆಯಾದವ ಜವಬ್ಧಾರಿ ಮರೆತಾಗ
ಹೆಂಡಕುಡಿವುದೊಂದೇ ನಿತ್ಯ ಕಾಯಕ ಎಂದಾಗ
ತನ್ನುದರದ ಕುಡಿಗಳಿಗಾಗಿ ಬದುಕ ಸವೆಸಿದಾಕೆ…
ತನ್ನ ಕನಸುಗಳ ಕೊಂದು ಬದುಕಿದಾಕೆ
ನಿಜ! ಅವಳ ಬದುಕು  ಅವಳಿಗಾಗಿ ಅಲ್ಲ…..
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

2 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

22 hours ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

23 hours ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago