ಅಶ್ಲೀಲ ವೀಡಿಯೊ ,ಮಾನಹಾನಿ ತೇಜೊವಧೆ ವೀಡಿಯೋ ಮಾಡಿದರೆ, ಶೇರ್ ಮಾಡಿದರೆ ಏನಾಗುತ್ತದೆ ?

July 5, 2019
10:00 AM

ಶಾಲಾ -ಕಾಲೇಜು ವಿದ್ಯಾರ್ಥಿಗಳು   ಹಾಗೂ ಸಾರ್ವಜನಿಕರು ಗಮನಿಸಲೇಬೇಕಾದ ಅಂಶ ಇದು. ಮೊಬೈಲ್, ಸೋಶಿಯಲ್ ಮೀಡಿಯಾ ಬಳಕೆ ಮಾಡುವ ಮಂದಿ ಎಚ್ಚರದಿಂದ ಬಳಕೆ ಮಾಡಿರಿ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಗಳು ಸಾಮೂಹಿಕ ಅತ್ಯಾಚಾರ ದಲ್ಲಿ ತೊಡಗಿದ ವೀಡಿಯೊ ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯ ಆಧಾರದ ಮೇಲೆ ಯಾವುದೇ ಅಶ್ಲೀಲ ವಾದಂತಹ ವೀಡಿಯೊಗಳು ,ಯಾವುದೇ ವ್ಯಕ್ತಿ ಯನ್ನ ತೇಜೊವದೆ ಮಾಡುವಂತಹ ವೀಡಿಯೋ ಗಳು ಧರ್ಮ ಹಾಗೂ ರಾಜಕೀಯ ಕ್ಕೆ ಸಂಬಂಧ ಪಟ್ಟಂತೆ ಮಾನಹಾನಿ ಕಾರಿ ಮಾಡುವಂತಹ ವೀಡಿಯೋ ,ಸಂದೇಶಗಳು ಹರಿದಾಡಿದರೆ “INFORMATION TECHNOLOGY ACT” ಪ್ರಕಾರ 3 ವರ್ಷ ಕ್ಕೂ ಮೇಲ್ಪಟ್ಟು ಜೈಲು ಹಾಗೂ 10 ಲಕ್ಷ ದಂಡವನ್ನ ವಿಧಿಸಬೇಕಾಗುತ್ತದೆ. ಅಲ್ಲದೆ ಅಶ್ಲೀಲ ವಾಗಿ ಬಂದಂತಹ ವೀಡಿಯೊ ಗಳು ಅಥವಾ ಮೆಸೇಜ್ ಗಳು ಆಗಿರಲಿ ಅದರ ಗುಣಮಟ್ಟ ನೋಡದೆ ,ಸತ್ಯಾಸತ್ಯತೆ ತಿಳಿಯದೆ ರವಾನೆ ಮಾಡುವುದರಿಂದ ಕೇಸಿಗೆ ಒಳಗಾಗುತ್ತೀರಿ.ಯಾರು ಸಂದೇಶ ರವಾನಿಸುತ್ತೀರೊ ಅವರ ಭವಿಷ್ಯ ದ ಮೇಲೂ ಪರಿಣಾಮ ಬೀರುತ್ತದೆ ಹಾಗೂ ನಿಮ್ಮ ಮನೆಯ ಘನತೆಗೂ ಕಪ್ಪು ಚುಕ್ಕೆಯಾಗಿದೆ ಇದಕ್ಕೆ ಕಾರಣವೇನೂ ಸಿಗಲ್ಲ. ಅಲ್ಲದೆ “IT ACT” ಪ್ರಕಾರ ನಿಮ್ಮ-ನಿಮ್ಮ ಮೊಬೈಲ್ ನಲ್ಲಿ ಇಂತಹ ಅಶ್ಲೀಲ ವಾದ ಸಂದೇಶ ಗಳು ವೀಡಿಯೋ ಗಳು ಬಂದು ನಿಮ್ಮ ಮೊಬೈಲ್ ನಲ್ಲಿ ಉಳಿಕೆಯಾಗಿದ್ದರೆ ಅದಕ್ಕೆ ನೀವು ಹೊಣೆಯಾಗುತ್ತೀರಿ.ತಕ್ಷಣ ಡಿಲೀಟ್ ಮಾಡುವಲ್ಲಿ ನೀವು ಪ್ರವೃತರಾಗಬೇಕು ಕಾಲೇಜೊಂದರ ವಿದ್ಯಾರ್ಥಿ ಗಳು ಸೇರಿ ಸಾಮೂಹಿಕ ಅತ್ಯಾಚಾರ ಮಾಡುವ ವೀಡಿಯೋಗಳು ,ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ಅದು ಕಾನೂನಿನ ಪ್ರಕಾರ ಘೋರ ಅಪರಾಧ ವಾಗಿರುತ್ತದೆ.ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವೀಡಿಯೋ ಹರಿದಾಡಿದವರನ್ನು ಈಗಾಗಲೇ ಬಂಧಿಸಲಾಗುತ್ತಿದೆ.ಆದರೂ ನಿರಂತರವಾಗಿ ಈಗಲೂ ಹರಿದಾಡುತ್ತಿರುವ ವಿಷಯವು ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದ್ದು ಅಂತಹವರ ಮೇಲೆ ನಿಗಾ ಗಮನಹರಿಸುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಗೇರುಹಣ್ಣು ಮೌಲ್ಯವರ್ಧನೆಗೆ ಉಚಿತ ತರಬೇತಿ : ಪುತ್ತೂರಿನ DCR ವತಿಯಿಂದ ಅವಕಾಶ
March 22, 2026
7:39 AM
by: ಮಿರರ್‌ ಡೆಸ್ಕ್
ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ
March 20, 2026
8:14 PM
by: ದ ರೂರಲ್ ಮಿರರ್.ಕಾಂ
ಪಿ.ಎಂ. ಕಿಸಾನ್ ಸಹಾಯಧನಕ್ಕೆ ‘FRUITS’ ತಂತ್ರಾಂಶದಲ್ಲಿ ನೋಂದಣಿ ಕಡ್ಡಾಯ
February 28, 2026
6:48 AM
by: ಮಿರರ್‌ ಡೆಸ್ಕ್
ಪುತ್ತೂರಿನಲ್ಲಿ ಫೆ.21 ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ
February 6, 2026
9:37 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror