Advertisement
ಅಪರಾಧ

ಅಶ್ಲೀಲ ವೀಡಿಯೊ ,ಮಾನಹಾನಿ ತೇಜೊವಧೆ ವೀಡಿಯೋ ಮಾಡಿದರೆ, ಶೇರ್ ಮಾಡಿದರೆ ಏನಾಗುತ್ತದೆ ?

Share

ಶಾಲಾ -ಕಾಲೇಜು ವಿದ್ಯಾರ್ಥಿಗಳು   ಹಾಗೂ ಸಾರ್ವಜನಿಕರು ಗಮನಿಸಲೇಬೇಕಾದ ಅಂಶ ಇದು. ಮೊಬೈಲ್, ಸೋಶಿಯಲ್ ಮೀಡಿಯಾ ಬಳಕೆ ಮಾಡುವ ಮಂದಿ ಎಚ್ಚರದಿಂದ ಬಳಕೆ ಮಾಡಿರಿ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಗಳು ಸಾಮೂಹಿಕ ಅತ್ಯಾಚಾರ ದಲ್ಲಿ ತೊಡಗಿದ ವೀಡಿಯೊ ಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಘಟನೆಯ ಆಧಾರದ ಮೇಲೆ ಯಾವುದೇ ಅಶ್ಲೀಲ ವಾದಂತಹ ವೀಡಿಯೊಗಳು ,ಯಾವುದೇ ವ್ಯಕ್ತಿ ಯನ್ನ ತೇಜೊವದೆ ಮಾಡುವಂತಹ ವೀಡಿಯೋ ಗಳು ಧರ್ಮ ಹಾಗೂ ರಾಜಕೀಯ ಕ್ಕೆ ಸಂಬಂಧ ಪಟ್ಟಂತೆ ಮಾನಹಾನಿ ಕಾರಿ ಮಾಡುವಂತಹ ವೀಡಿಯೋ ,ಸಂದೇಶಗಳು ಹರಿದಾಡಿದರೆ “INFORMATION TECHNOLOGY ACT” ಪ್ರಕಾರ 3 ವರ್ಷ ಕ್ಕೂ ಮೇಲ್ಪಟ್ಟು ಜೈಲು ಹಾಗೂ 10 ಲಕ್ಷ ದಂಡವನ್ನ ವಿಧಿಸಬೇಕಾಗುತ್ತದೆ. ಅಲ್ಲದೆ ಅಶ್ಲೀಲ ವಾಗಿ ಬಂದಂತಹ ವೀಡಿಯೊ ಗಳು ಅಥವಾ ಮೆಸೇಜ್ ಗಳು ಆಗಿರಲಿ ಅದರ ಗುಣಮಟ್ಟ ನೋಡದೆ ,ಸತ್ಯಾಸತ್ಯತೆ ತಿಳಿಯದೆ ರವಾನೆ ಮಾಡುವುದರಿಂದ ಕೇಸಿಗೆ ಒಳಗಾಗುತ್ತೀರಿ.ಯಾರು ಸಂದೇಶ ರವಾನಿಸುತ್ತೀರೊ ಅವರ ಭವಿಷ್ಯ ದ ಮೇಲೂ ಪರಿಣಾಮ ಬೀರುತ್ತದೆ ಹಾಗೂ ನಿಮ್ಮ ಮನೆಯ ಘನತೆಗೂ ಕಪ್ಪು ಚುಕ್ಕೆಯಾಗಿದೆ ಇದಕ್ಕೆ ಕಾರಣವೇನೂ ಸಿಗಲ್ಲ. ಅಲ್ಲದೆ “IT ACT” ಪ್ರಕಾರ ನಿಮ್ಮ-ನಿಮ್ಮ ಮೊಬೈಲ್ ನಲ್ಲಿ ಇಂತಹ ಅಶ್ಲೀಲ ವಾದ ಸಂದೇಶ ಗಳು ವೀಡಿಯೋ ಗಳು ಬಂದು ನಿಮ್ಮ ಮೊಬೈಲ್ ನಲ್ಲಿ ಉಳಿಕೆಯಾಗಿದ್ದರೆ ಅದಕ್ಕೆ ನೀವು ಹೊಣೆಯಾಗುತ್ತೀರಿ.ತಕ್ಷಣ ಡಿಲೀಟ್ ಮಾಡುವಲ್ಲಿ ನೀವು ಪ್ರವೃತರಾಗಬೇಕು ಕಾಲೇಜೊಂದರ ವಿದ್ಯಾರ್ಥಿ ಗಳು ಸೇರಿ ಸಾಮೂಹಿಕ ಅತ್ಯಾಚಾರ ಮಾಡುವ ವೀಡಿಯೋಗಳು ,ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು,ಅದು ಕಾನೂನಿನ ಪ್ರಕಾರ ಘೋರ ಅಪರಾಧ ವಾಗಿರುತ್ತದೆ.ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ವೀಡಿಯೋ ಹರಿದಾಡಿದವರನ್ನು ಈಗಾಗಲೇ ಬಂಧಿಸಲಾಗುತ್ತಿದೆ.ಆದರೂ ನಿರಂತರವಾಗಿ ಈಗಲೂ ಹರಿದಾಡುತ್ತಿರುವ ವಿಷಯವು ಪೋಲಿಸ್ ಇಲಾಖೆಯ ಗಮನಕ್ಕೆ ಬಂದಿದ್ದು ಅಂತಹವರ ಮೇಲೆ ನಿಗಾ ಗಮನಹರಿಸುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

3 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

3 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

5 days ago