ಮಂಗಳೂರು : ಅಸಂಘಟಿತ ವಲಯದ ಕಾರ್ಮಿಕರಾದ ಖಾಸಗಿ ವಾಣಿಜ್ಯ ವಾಹನ ಚಾಲಕರು, ಹಮಾಲರು, ಟೈಲರುಗಳು, ಚಿಂದಿ ಆಯುವವರು, ಗೃಹಕಾರ್ಮಿಕರು, ಮೆಕಾನಿಕ್ಗಳು, ಅಗಸರು, ಅಕ್ಕಸಾಲಿಗರು, ಕಮ್ಮಾರರು, ಕುಂಬಾರರು, ಕ್ಷೌರಿಕರು, ಹಾಗೂ ಮಂಡಕ್ಕಿ ಭಟ್ಟಿ ಕಾರ್ಮಿಕರುಗಳಿಗೆ ಮಾರ್ಚ್ 1 ರಂದು ಶ್ರಮ ಸಮ್ಮಾನ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಕಾರ್ಮಿಕರು ದಾಖಲೆಯೊಂದಿಗೆ ಅರ್ಜಿ ನಮೂನೆ 5ನ್ನು ಕಾರ್ಮಿಕ ಅಧಿಕಾರಿ ಕಚೇರಿಯಿಂದ ಪಡೆದುಕೊಂಡು ಕಾರ್ಮಿಕರ ಬಳಿ ಇರುವ ಸ್ಮಾರ್ಟ್ ಕಾರ್ಡ್, ವಿದ್ಯಾರ್ಹತೆಯ ಪ್ರಮಾಣ ಪತ್ರ, ಸರ್ವಿಸ್ ಸರ್ಟಿಫಿಕೇಟ್, ಪೋಲಿಸ್ ಇಲಾಖೆಯಿಂದ ಯಾವುದೇ ಪ್ರಕರಣ ಇರುವುದಿಲ್ಲವೆಂದು ಮೂಲ ಪ್ರಮಾಣ ಪತ್ರವನ್ನು, ವೃತ್ತಿಯ ಬಗ್ಗೆ ತರಬೇತಿ ಪಡೆದ ಪ್ರಮಾಣ ಪತ್ರಗಳಿದ್ದಲ್ಲಿ ಲಗತ್ತಿಸಿ ಫೆಬ್ರವರಿ 18 ರೊಳಗೆ ಕಾರ್ಮಿಕ ಅಧಿಕಾರಿ, ದ.ಕ ಉಪವಿಭಾಗ-1, ಮಂಗಳೂರು, ಭಾರತ್ಬೀಡಿ ಎದುರು, ಬಂಟ್ಸ್ಹಾಸ್ಟೇಲ್, ಮಂಗಳೂರು-575003 ಕಚೇರಿಗೆ ಸಲ್ಲಿಸಬೇಕೆಂದು ಮಂಗಳೂರು, ದ.ಕ ಜಿಲ್ಲೆ, ಕಾರ್ಮಿಕ ಅಧಿಕಾರಿ ಪ್ರಕಟಣೆ ತಿಳಿಸಿದೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…