Advertisement
ಸುದ್ದಿಗಳು

ಅಸಹಕಾರ ಚಳವಳಿಯ ಇಫೆಕ್ಟ್ :ಶಿಕ್ಷಕರ ದಿನಾಚರಣೆಗೆ ಜನಪ್ರತಿನಿಧಿಗಳ ಗೈರು..!

Share

ಸುಳ್ಯ: ಶಾಸಕ ಎಸ್‌. ಅಂಗಾರ ಅವರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಸುಳ್ಯ ಬಿಜೆಪಿ ಘೋಷಿಸಿರುವ ಅಸಹಕಾರ ಚಳವಳಿಯ ಕಾರಣದಿಂದ  ಸುಳ್ಯ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆಯ ವೇದಿಕೆ ಮಾತ್ರ ಖಾಲಿ ಖಾಲಿಯಾಗಿತ್ತು. ಅಸಹಕಾರ ಚಳವಳಿ ಘೋಷಿಸಿದ ಬಳಿಕ ಬಿಜೆಪಿ ನಾಯಕರು, ಕೆಲವು ಜನಪ್ರತಿನಿಧಿಗಳು ಬೆಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿದ್ದರು. ಆದರೆ ತಾಲೂಕಿನಲ್ಲಿ ಜನಪ್ರತಿನಿಧಿಗಳ ಅಸಹಾಕಾರ ಮುಂದುವರಿದಿದೆ.

ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಬೇಕಿದ್ದ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನ ನೆರವೇರಿಸಬೇಕಿದ್ದ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್.ಎನ್.ಮನ್ಮಥ, ಹರೀಶ್ ಕಂಜಿಪಿಲಿ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಸಮಾರಂಭಕ್ಕೆ ಪ್ರತಿ ಬಾರಿ ಆಗಮಿಸುತ್ತಿದ್ದ ಇತರ ಬಿಜೆಪಿ ಜನಪ್ರತಿನಿಧಿಗಳು ಕೂಡ ಭಾಗವಹಿಸಲಿಲ್ಲ. ಆದರೆ ಇದ್ಯಾವುದನ್ನೂ ಲೆಕ್ಕಿಸದೆ ಶಾಸಕ ಎಸ್.ಅಂಗಾರ ಮಾತ್ರ ಕಾರ್ಯಕ್ರ‌ಮಕ್ಕೆ ಆಗಮಿಸಿ ಉದ್ಘಾಟನೆ ನೆರವೇರಿಸಿ ಅಧ್ಯಕ್ಷತೆ ವಹಿಸಿ ಅಧ್ಯಕ್ಷೀಯ ಭಾಷಣ ಮಾಡಿ ತೆರಳಿದರು.

ಕಾರಣಗಳು ಯಾವುದೇ ಇರಬಹುದು, ಕಾರಣಗಳು ನೂರು ಇರಬಹುದು ಆದರೆ ಶಿಕ್ಷಕರ ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು ಈ ರೀತಿ ಸಾಮೂಹಿಕವಾಗಿ ಗೈರು ಹಾಜರಾಗಿರುವುದು ಮಾತ್ರ ಒಪ್ಪುವಂತದಲ್ಲ ಎಂಬ ಅಭಿಪ್ರಾಯ ವೇದಿಕೆಯಿಂದ ಮತ್ತು ಸಭಾಂಗಣದಿಂದ ಕೇಳಿ ಬಂತು.

“ಕಾರಣ ಏನೇ ಇದ್ದರೂ, ಶಿಕ್ಷಕರನ್ನು ಗೌರವಿಸುವ ರೀತಿ ಇದಲ್ಲ” ಎಂಬ ಅಭಿಪ್ರಾಯವನ್ನು ಸಮಾರಂಭದಲ್ಲಿ ಪ್ರಧಾನ ಉಪನ್ಯಾಸ ಮಾಡಿದ ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ವ್ಯಕ್ತಪಡಿಸಿದರು.

ಸತ್ಯಕ್ಕೆ, ಪ್ರಮಾಣಿಕತೆಗೆ ಬೆಲೆ ಇದೆ ಎಂದು ನಂಬಿದ್ದೇನೆ – ಅಂಗಾರ

ಸಚಿವ ಸ್ಥಾನ ತಪ್ಪಿದ ಮತ್ತು ಬಳಿಕದ ರಾಜಕೀಯ ಬೆಳವಣಿಗೆಯ ನಂತರ ಸುಳ್ಯದಲ್ಲಿ ನಡೆದ ಪ್ರಮುಖ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿದ ಶಾಸಕ ಅಂಗಾರರು ಸಚಿವ ಸ್ಥಾನ ತಪ್ಪಿ ಹೋಗಿರುವ ಬಗ್ಗೆ ನೇರವಾಗಿ ಯಾವುದೇ ಪ್ರಸ್ತಾಪ ಮಾಡಲಿಲ್ಲ. ಸತ್ಯಕ್ಕೆ, ಪ್ರಾಮಾಣಿಕತೆಗೆ ಒಂದಲ್ಲಾ ಒಂದು ದಿನ ಬೆಲೆ ಸಿಕ್ಕಿಯೇ ಸಿಗುತ್ತದೆ ಎಂಬ ನಂಬಿಕೆವಿದೆ. ಆ ನಂಬಿಕೆಯ ಆಧಾರದಲ್ಲಿಯೇ ಕೆಲಸ ಮಾಡಿದ್ದೇನೆ. ಮುಂದೆಯೂ ಆ ನಂಬಿಕೆಯ ಆಧಾರದಲ್ಲಿಯೇ ಕೆಲಸವನ್ನು ಮುಂದುವರಿಸುತ್ತೇನೆ ಎಂದಷ್ಟೇ ತಮ್ಮ ಭಾಷಣದಲ್ಲಿ ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

5 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

22 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

1 day ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

1 day ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

1 day ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago