Advertisement
ಸುದ್ದಿಗಳು

ಅಸಹಕಾರ ಚಳವಳಿ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷರ ಪದಗ್ರಹಣಕ್ಕೆ ಸುಳ್ಯ ಬಿಜೆಪಿ

Share

ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿಲ್ಲ ಎಂದು ಮುನಿಸುಕೊಂಡು ಜಿಲ್ಲೆಯ ಮತ್ತು ರಾಜ್ಯ ಬಿಜೆಪಿ ನೇತೃತ್ವದ ಜೊತೆ ಅಸಹಕಾರ ಚಳವಳಿಯನ್ನು ಸುಳ್ಯ ಬಿಜೆಪಿ ಘೋಷಿಸಿದೆ. ಆದರೆ ಅಸಹಕಾರ ಚಳವಳಿಯ ಮಧ್ಯೆಯೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿಕಾರ ವಹಿಸುವ ಕಾರ್ಯಕ್ರಮಕ್ಕೆ ಸುಳ್ಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಆ.27 ರಂದು ಬೆಂಗಳೂರು ಕಚೇರಿಯಲ್ಲಿ ನಡೆಯುವ ಸಮಾರಂಭಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಿಂದ 250 ರಿಂದ 300 ಮಂದಿ ಕಾರ್ಯಕರ್ತರು, ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ‘ಸುಳ್ಯ ನ್ಯೂಸ್.ಕಾಂ‘ಗೆ ತಿಳಿಸಿದ್ದಾರೆ. 26 ರಂದು ರಾತ್ರಿಯೇ ಇವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

ಬಿಜೆಪಿ ಅಸಹಕಾರ ಚಳವಳಿ ಘೋಷಿಸಿದ ಕಾರಣ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಜಿಜ್ಞಾಸೆ ಇತ್ತು. ಇದಕ್ಕೆ ಬಿಜೆಪಿ ಮುಖಂಡರೇ ತೆರೆ ಎಳೆದಿದ್ದಾರೆ. ಅಸಹಕಾರ ಚಳವಳಿ, ಜನಪ್ರತಿನಿಧಿಗಳ ರಾಜಿನಾಮೆ ಮಧ್ಯೆ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಕುತೂಹಲ ಜಿಲ್ಲಾ ನೇತೃತ್ವಕ್ಕೂ ಇತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ನೇತೃತ್ವದಲ್ಲಿ ಜಿಲ್ಲಾ ಮುಖಂಡರು ಸುಳ್ಯಕ್ಕೆ ಆಗಮಿಸಿ ಸುಳ್ಯದ ಮುಖಂಡರ ಮನವೊಲಿಸಿ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ಮಾಡಲು ಯಶಸ್ವಿಯಾಗಿದ್ದಾರೆ. ಶಾಸಕರಿಗೆ ಸಚಿವ ಸ್ಥಾನ ಸಿಗುವ ತನಕ ಅಸಹಕರ ಚಳವಳಿ ಮುಂದುವರಿಯಲಿದೆ. ಆದರೆ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಭಾಗವಹಿಸುವುದು ಅನಿವಾರ್ಯವಾಗಿದೆ ಎಂದು ಸುಳ್ಯ ಬಿಜೆಪಿ ಮುಖಂಡರು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

40 minutes ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

47 minutes ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

1 hour ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

1 hour ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

18 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago