Advertisement
ಸುದ್ದಿಗಳು

ಅಸಹಕಾರ ಚಳವಳಿ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷರ ಪದಗ್ರಹಣಕ್ಕೆ ಸುಳ್ಯ ಬಿಜೆಪಿ

Share

ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿಲ್ಲ ಎಂದು ಮುನಿಸುಕೊಂಡು ಜಿಲ್ಲೆಯ ಮತ್ತು ರಾಜ್ಯ ಬಿಜೆಪಿ ನೇತೃತ್ವದ ಜೊತೆ ಅಸಹಕಾರ ಚಳವಳಿಯನ್ನು ಸುಳ್ಯ ಬಿಜೆಪಿ ಘೋಷಿಸಿದೆ. ಆದರೆ ಅಸಹಕಾರ ಚಳವಳಿಯ ಮಧ್ಯೆಯೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿಕಾರ ವಹಿಸುವ ಕಾರ್ಯಕ್ರಮಕ್ಕೆ ಸುಳ್ಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಆ.27 ರಂದು ಬೆಂಗಳೂರು ಕಚೇರಿಯಲ್ಲಿ ನಡೆಯುವ ಸಮಾರಂಭಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಿಂದ 250 ರಿಂದ 300 ಮಂದಿ ಕಾರ್ಯಕರ್ತರು, ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ‘ಸುಳ್ಯ ನ್ಯೂಸ್.ಕಾಂ‘ಗೆ ತಿಳಿಸಿದ್ದಾರೆ. 26 ರಂದು ರಾತ್ರಿಯೇ ಇವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

ಬಿಜೆಪಿ ಅಸಹಕಾರ ಚಳವಳಿ ಘೋಷಿಸಿದ ಕಾರಣ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಜಿಜ್ಞಾಸೆ ಇತ್ತು. ಇದಕ್ಕೆ ಬಿಜೆಪಿ ಮುಖಂಡರೇ ತೆರೆ ಎಳೆದಿದ್ದಾರೆ. ಅಸಹಕಾರ ಚಳವಳಿ, ಜನಪ್ರತಿನಿಧಿಗಳ ರಾಜಿನಾಮೆ ಮಧ್ಯೆ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಕುತೂಹಲ ಜಿಲ್ಲಾ ನೇತೃತ್ವಕ್ಕೂ ಇತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ನೇತೃತ್ವದಲ್ಲಿ ಜಿಲ್ಲಾ ಮುಖಂಡರು ಸುಳ್ಯಕ್ಕೆ ಆಗಮಿಸಿ ಸುಳ್ಯದ ಮುಖಂಡರ ಮನವೊಲಿಸಿ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ಮಾಡಲು ಯಶಸ್ವಿಯಾಗಿದ್ದಾರೆ. ಶಾಸಕರಿಗೆ ಸಚಿವ ಸ್ಥಾನ ಸಿಗುವ ತನಕ ಅಸಹಕರ ಚಳವಳಿ ಮುಂದುವರಿಯಲಿದೆ. ಆದರೆ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಭಾಗವಹಿಸುವುದು ಅನಿವಾರ್ಯವಾಗಿದೆ ಎಂದು ಸುಳ್ಯ ಬಿಜೆಪಿ ಮುಖಂಡರು ಹೇಳುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

5 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

9 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

1 day ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

1 day ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

1 day ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 days ago