ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿಲ್ಲ ಎಂದು ಮುನಿಸುಕೊಂಡು ಜಿಲ್ಲೆಯ ಮತ್ತು ರಾಜ್ಯ ಬಿಜೆಪಿ ನೇತೃತ್ವದ ಜೊತೆ ಅಸಹಕಾರ ಚಳವಳಿಯನ್ನು ಸುಳ್ಯ ಬಿಜೆಪಿ ಘೋಷಿಸಿದೆ. ಆದರೆ ಅಸಹಕಾರ ಚಳವಳಿಯ ಮಧ್ಯೆಯೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿಕಾರ ವಹಿಸುವ ಕಾರ್ಯಕ್ರಮಕ್ಕೆ ಸುಳ್ಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಆ.27 ರಂದು ಬೆಂಗಳೂರು ಕಚೇರಿಯಲ್ಲಿ ನಡೆಯುವ ಸಮಾರಂಭಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಿಂದ 250 ರಿಂದ 300 ಮಂದಿ ಕಾರ್ಯಕರ್ತರು, ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ‘ಸುಳ್ಯ ನ್ಯೂಸ್.ಕಾಂ‘ಗೆ ತಿಳಿಸಿದ್ದಾರೆ. 26 ರಂದು ರಾತ್ರಿಯೇ ಇವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.
ಬಿಜೆಪಿ ಅಸಹಕಾರ ಚಳವಳಿ ಘೋಷಿಸಿದ ಕಾರಣ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಜಿಜ್ಞಾಸೆ ಇತ್ತು. ಇದಕ್ಕೆ ಬಿಜೆಪಿ ಮುಖಂಡರೇ ತೆರೆ ಎಳೆದಿದ್ದಾರೆ. ಅಸಹಕಾರ ಚಳವಳಿ, ಜನಪ್ರತಿನಿಧಿಗಳ ರಾಜಿನಾಮೆ ಮಧ್ಯೆ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಕುತೂಹಲ ಜಿಲ್ಲಾ ನೇತೃತ್ವಕ್ಕೂ ಇತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ನೇತೃತ್ವದಲ್ಲಿ ಜಿಲ್ಲಾ ಮುಖಂಡರು ಸುಳ್ಯಕ್ಕೆ ಆಗಮಿಸಿ ಸುಳ್ಯದ ಮುಖಂಡರ ಮನವೊಲಿಸಿ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ಮಾಡಲು ಯಶಸ್ವಿಯಾಗಿದ್ದಾರೆ. ಶಾಸಕರಿಗೆ ಸಚಿವ ಸ್ಥಾನ ಸಿಗುವ ತನಕ ಅಸಹಕರ ಚಳವಳಿ ಮುಂದುವರಿಯಲಿದೆ. ಆದರೆ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಭಾಗವಹಿಸುವುದು ಅನಿವಾರ್ಯವಾಗಿದೆ ಎಂದು ಸುಳ್ಯ ಬಿಜೆಪಿ ಮುಖಂಡರು ಹೇಳುತ್ತಾರೆ.
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…