Advertisement
ಸುದ್ದಿಗಳು

ಅಸಹಕಾರ ಚಳವಳಿ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷರ ಪದಗ್ರಹಣಕ್ಕೆ ಸುಳ್ಯ ಬಿಜೆಪಿ

Share

ಸುಳ್ಯ: ಶಾಸಕ ಎಸ್.ಅಂಗಾರ ಅವರಿಗೆ ಸಚಿವ ಸ್ಥಾನ ದೊರೆಯಲಿಲ್ಲ ಎಂದು ಮುನಿಸುಕೊಂಡು ಜಿಲ್ಲೆಯ ಮತ್ತು ರಾಜ್ಯ ಬಿಜೆಪಿ ನೇತೃತ್ವದ ಜೊತೆ ಅಸಹಕಾರ ಚಳವಳಿಯನ್ನು ಸುಳ್ಯ ಬಿಜೆಪಿ ಘೋಷಿಸಿದೆ. ಆದರೆ ಅಸಹಕಾರ ಚಳವಳಿಯ ಮಧ್ಯೆಯೂ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್ ಅವರು ಅಧಿಕಾರ ವಹಿಸುವ ಕಾರ್ಯಕ್ರಮಕ್ಕೆ ಸುಳ್ಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಆ.27 ರಂದು ಬೆಂಗಳೂರು ಕಚೇರಿಯಲ್ಲಿ ನಡೆಯುವ ಸಮಾರಂಭಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದಿಂದ 250 ರಿಂದ 300 ಮಂದಿ ಕಾರ್ಯಕರ್ತರು, ನಾಯಕರು ಭಾಗವಹಿಸಲಿದ್ದಾರೆ ಎಂದು ಮೂಲಗಳು ‘ಸುಳ್ಯ ನ್ಯೂಸ್.ಕಾಂ‘ಗೆ ತಿಳಿಸಿದ್ದಾರೆ. 26 ರಂದು ರಾತ್ರಿಯೇ ಇವರು ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ.

ಬಿಜೆಪಿ ಅಸಹಕಾರ ಚಳವಳಿ ಘೋಷಿಸಿದ ಕಾರಣ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಜಿಜ್ಞಾಸೆ ಇತ್ತು. ಇದಕ್ಕೆ ಬಿಜೆಪಿ ಮುಖಂಡರೇ ತೆರೆ ಎಳೆದಿದ್ದಾರೆ. ಅಸಹಕಾರ ಚಳವಳಿ, ಜನಪ್ರತಿನಿಧಿಗಳ ರಾಜಿನಾಮೆ ಮಧ್ಯೆ ಸುಳ್ಯ ಬಿಜೆಪಿಯವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರಾ ಎಂಬ ಕುತೂಹಲ ಜಿಲ್ಲಾ ನೇತೃತ್ವಕ್ಕೂ ಇತ್ತು. ಈ ಹಿನ್ನಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು ನೇತೃತ್ವದಲ್ಲಿ ಜಿಲ್ಲಾ ಮುಖಂಡರು ಸುಳ್ಯಕ್ಕೆ ಆಗಮಿಸಿ ಸುಳ್ಯದ ಮುಖಂಡರ ಮನವೊಲಿಸಿ ಕಾರ್ಯಕ್ರಮಕ್ಕೆ ಭಾಗವಹಿಸುವಂತೆ ಮಾಡಲು ಯಶಸ್ವಿಯಾಗಿದ್ದಾರೆ. ಶಾಸಕರಿಗೆ ಸಚಿವ ಸ್ಥಾನ ಸಿಗುವ ತನಕ ಅಸಹಕರ ಚಳವಳಿ ಮುಂದುವರಿಯಲಿದೆ. ಆದರೆ ರಾಜ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ಭಾಗವಹಿಸುವುದು ಅನಿವಾರ್ಯವಾಗಿದೆ ಎಂದು ಸುಳ್ಯ ಬಿಜೆಪಿ ಮುಖಂಡರು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?

ಅಮರನಾಥ ಯಾತ್ರೆ ಆರಂಭವಾದ ಕೆಲವೇ ದಿನಗಳಲ್ಲಿ ಹಿಮ ಶಿವಲಿಂಗವು 90%ಕ್ಕೂ ಹೆಚ್ಚು ಕರಗಿರುವುದಾಗಿ…

4 hours ago

16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿರ್ಬಂಧ ವಿಧಿಸಿರುವ ಆಸ್ಟ್ರೇಲಿಯಾದ ಕ್ರಮವನ್ನು ಪ್ರಧಾನಿ…

14 hours ago

ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?

ಎಲ್‌ ನಿನೊ ಪರಿಣಾಮದಿಂದ 2027ರಲ್ಲಿ ಎಣ್ಣೆ ಸಾರ್ಡಿನ್ ಮೀನುಗಳ ಉತ್ಪಾದನೆ ಕುಸಿಯುವ ಸಾಧ್ಯತೆ…

15 hours ago

ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ

ದೇಶದ ಬಹುತೇಕ ಭಾಗಗಳಿಂದ ಮಳೆ ಮೋಡಗಳು ಕಡಿಮೆಯಾಗಲು ಪಶ್ಚಿಮ ಪೆಸಿಫಿಕ್‌ನ ಪ್ರಬಲ ಚಂಡಮಾರುತ…

19 hours ago

ಮತ್ತೆ ಹೆಚ್ಚಿದ ದೇಶದ ಮಳೆ ಕೊರತೆ – ಜುಲೈ ಆರಂಭದ ಚೇತರಿಕೆ ಕುಂಠಿತ, ಮುಂಗಾರು ಮತ್ತೆ ದುರ್ಬಲ

ಜುಲೈ ಮೊದಲ ವಾರದ ಚೇತರಿಕೆಯ ಬಳಿಕ ದೇಶದ ಮುಂಗಾರು ಮತ್ತೆ ದುರ್ಬಲಗೊಂಡಿದ್ದು, ಮಳೆ…

20 hours ago

ಆರೋಪದ ಆಚೆ ನಿಂತು ಒಮ್ಮೆ ಯೋಚಿಸಿದ್ದೀರಾ..?

ಯಾರನ್ನಾದರೂ ಆರೋಪಿಸುವ ಮೊದಲು ಅವರ ಪರಿಸ್ಥಿತಿ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡಿದರೆ ಅನೇಕ ಸಂಬಂಧಗಳು…

23 hours ago