ನರಿಮೊಗರು: ಈ ಯುವಕ ನೋಡಲು ಎಲ್ಲರಂತೆಯೇ ಸಾಮಾನ್ಯರಂತೆಯೇ ಕಾಣುತ್ತಾರೆ.ಆದರೆ ಇವರ ಸಮಸ್ಯೆ ಮಾತ್ರ ವಿಶೇಷವಾದದು.ಸುಮಾರು 27 ವರ್ಷ ಪ್ರಾಯದ ಈ ಯುವಕನ ಹೆಸರು ಪುನೀತ್,ನರಿಮೊಗರು ಗ್ರಾಮದ ಕೆದ್ಕಾರು ನಿವಾಸಿ ಮೋನಪ್ಪ ಗೌಡರ ಪುತ್ರ.
ಈ ಯುವಕನಿಗೆ ಹುಟ್ಟುವಾಗಲೇ ಮೂತ್ರಕೋಶ ಹಾಗೆ ಜನನಾಂಗವಿಲ್ಲದೆ ಇದ್ದವರು.ಹೊಕ್ಕಳು ಮೂಲಕ ಮೂತ್ರ ಹೋಗುತ್ತಿದ್ದು,ಶಸ್ತ್ರ ಚಿಕಿತ್ಸೆ ಬಳಿಕ ಹೊರಗಡೆ ಚೀಲ ಜೋಡಿಸಿ ಮೂತ್ರ ಹೋಗುವಂತೆ ಪುನೀತ್ ಆವರು 5 ವರ್ಷದ ಬಾಲಕನಾಗಿದ್ದಾಗ ಮಾಡಲಾಗಿತ್ತು.ಇದು ವೈದ್ಯಕೀಯ ಲೋಕದಲ್ಲೇ ವಿಶೇಷ ಪ್ರಕರಣವೆಂದು ಮಾಧ್ಯಮಗಳಲ್ಲಿ 22 ವರ್ಷಗಳ ಹಿಂದೆ ಭಾರಿ ಸುದ್ದಿಯಾಗಿತ್ತು.ಹೀಗೆ ಬಾಲ್ಯದಿಂದ ಈಗಿನವರೆಗೂ ಈತನ ಚಿಕಿತ್ಸೆಗಾಗಿ ಮನೆಯವರು ಲಕ್ಷಾಂತರ ವ್ಯಯ ಮಾಡಿದ್ದಾರೆ.
ಹಲವು ಬಾರಿ ಕಿಡ್ನಿ ಸಮಸ್ಯೆ ಕಂಡು ಬಂದು ಚಿಕಿತ್ಸೆ ಪಡೆದುಕೊಂಡಿದ್ದಾರೆ.ಆದರೆ ಕೆಲ ಸಮಯದಿಂದ ತೀರಾ ಅನಾರೋಗ್ಯ ಎದುರಿಸುತ್ತಿರುವ ಈ ಯುವಕನ ಮನೆಯವರಿಗೆ ಈಗ ಮಗನ ಚಿಕಿತ್ಸೆಗೆ ಹಣ ಹೊಂದಿಸುವುದು ಸವಾಲಿನ ಕೆಲಸವಾಗಿದೆ.ಈಗ ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ವ್ಯಯಿಸಲಾಗಿದ್ದು,ಮುಂದಿನ ಚಿಕಿತ್ಸೆಗೆ ಆರ್ಥಿಕ ಅಡಚಣೆಯಲ್ಲಿದ್ದಾರೆ. ಇವರು ದಾನಿಗಳು ಆರ್ಥಿಕ ಸಹಕಾರ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಸಹಾಯ ಮಾಡುವ ದಾನಿಗಳು ಈ ಖಾತೆಗೆ ಜಮೆ ಮಾಡುವಂತೆ ಕೋರಿದ್ದಾರೆ. ಸಂಪರ್ಕ ಮೋನಪ್ಪ ಗೌಡ 8496827014, 9980575433
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…
ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…
ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …
ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…
ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…