ನರಿಮೊಗರು: ಈ ಯುವಕ ನೋಡಲು ಎಲ್ಲರಂತೆಯೇ ಸಾಮಾನ್ಯರಂತೆಯೇ ಕಾಣುತ್ತಾರೆ.ಆದರೆ ಇವರ ಸಮಸ್ಯೆ ಮಾತ್ರ ವಿಶೇಷವಾದದು.ಸುಮಾರು 27 ವರ್ಷ ಪ್ರಾಯದ ಈ ಯುವಕನ ಹೆಸರು ಪುನೀತ್,ನರಿಮೊಗರು ಗ್ರಾಮದ ಕೆದ್ಕಾರು ನಿವಾಸಿ ಮೋನಪ್ಪ ಗೌಡರ ಪುತ್ರ.
ಈ ಯುವಕನಿಗೆ ಹುಟ್ಟುವಾಗಲೇ ಮೂತ್ರಕೋಶ ಹಾಗೆ ಜನನಾಂಗವಿಲ್ಲದೆ ಇದ್ದವರು.ಹೊಕ್ಕಳು ಮೂಲಕ ಮೂತ್ರ ಹೋಗುತ್ತಿದ್ದು,ಶಸ್ತ್ರ ಚಿಕಿತ್ಸೆ ಬಳಿಕ ಹೊರಗಡೆ ಚೀಲ ಜೋಡಿಸಿ ಮೂತ್ರ ಹೋಗುವಂತೆ ಪುನೀತ್ ಆವರು 5 ವರ್ಷದ ಬಾಲಕನಾಗಿದ್ದಾಗ ಮಾಡಲಾಗಿತ್ತು.ಇದು ವೈದ್ಯಕೀಯ ಲೋಕದಲ್ಲೇ ವಿಶೇಷ ಪ್ರಕರಣವೆಂದು ಮಾಧ್ಯಮಗಳಲ್ಲಿ 22 ವರ್ಷಗಳ ಹಿಂದೆ ಭಾರಿ ಸುದ್ದಿಯಾಗಿತ್ತು.ಹೀಗೆ ಬಾಲ್ಯದಿಂದ ಈಗಿನವರೆಗೂ ಈತನ ಚಿಕಿತ್ಸೆಗಾಗಿ ಮನೆಯವರು ಲಕ್ಷಾಂತರ ವ್ಯಯ ಮಾಡಿದ್ದಾರೆ.
ಹಲವು ಬಾರಿ ಕಿಡ್ನಿ ಸಮಸ್ಯೆ ಕಂಡು ಬಂದು ಚಿಕಿತ್ಸೆ ಪಡೆದುಕೊಂಡಿದ್ದಾರೆ.ಆದರೆ ಕೆಲ ಸಮಯದಿಂದ ತೀರಾ ಅನಾರೋಗ್ಯ ಎದುರಿಸುತ್ತಿರುವ ಈ ಯುವಕನ ಮನೆಯವರಿಗೆ ಈಗ ಮಗನ ಚಿಕಿತ್ಸೆಗೆ ಹಣ ಹೊಂದಿಸುವುದು ಸವಾಲಿನ ಕೆಲಸವಾಗಿದೆ.ಈಗ ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ವ್ಯಯಿಸಲಾಗಿದ್ದು,ಮುಂದಿನ ಚಿಕಿತ್ಸೆಗೆ ಆರ್ಥಿಕ ಅಡಚಣೆಯಲ್ಲಿದ್ದಾರೆ. ಇವರು ದಾನಿಗಳು ಆರ್ಥಿಕ ಸಹಕಾರ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಸಹಾಯ ಮಾಡುವ ದಾನಿಗಳು ಈ ಖಾತೆಗೆ ಜಮೆ ಮಾಡುವಂತೆ ಕೋರಿದ್ದಾರೆ. ಸಂಪರ್ಕ ಮೋನಪ್ಪ ಗೌಡ 8496827014, 9980575433
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…