Advertisement
ಸುದ್ದಿಗಳು

ಅಸಹಾಯಕ ಸ್ಥಿತಿಯಲ್ಲಿ ಪುನೀತ್ ಕೆದ್ಕಾರು , ದಾನಿಗಳಿಂದ ನೆರವಿಗೆ ಮೊರೆ

Share

ನರಿಮೊಗರು: ಈ ಯುವಕ ನೋಡಲು ಎಲ್ಲರಂತೆಯೇ ಸಾಮಾನ್ಯರಂತೆಯೇ ಕಾಣುತ್ತಾರೆ.ಆದರೆ ಇವರ ಸಮಸ್ಯೆ ಮಾತ್ರ ವಿಶೇಷವಾದದು.ಸುಮಾರು 27 ವರ್ಷ ಪ್ರಾಯದ ಈ ಯುವಕನ ಹೆಸರು ಪುನೀತ್,ನರಿಮೊಗರು ಗ್ರಾಮದ ಕೆದ್ಕಾರು ನಿವಾಸಿ ಮೋನಪ್ಪ ಗೌಡರ ಪುತ್ರ.

ಈ ಯುವಕನಿಗೆ ಹುಟ್ಟುವಾಗಲೇ ಮೂತ್ರಕೋಶ ಹಾಗೆ ಜನನಾಂಗವಿಲ್ಲದೆ ಇದ್ದವರು.ಹೊಕ್ಕಳು ಮೂಲಕ ಮೂತ್ರ ಹೋಗುತ್ತಿದ್ದು,ಶಸ್ತ್ರ ಚಿಕಿತ್ಸೆ ಬಳಿಕ ಹೊರಗಡೆ ಚೀಲ ಜೋಡಿಸಿ ಮೂತ್ರ ಹೋಗುವಂತೆ ಪುನೀತ್ ಆವರು 5 ವರ್ಷದ ಬಾಲಕನಾಗಿದ್ದಾಗ ಮಾಡಲಾಗಿತ್ತು.ಇದು ವೈದ್ಯಕೀಯ ಲೋಕದಲ್ಲೇ ವಿಶೇಷ ಪ್ರಕರಣವೆಂದು ಮಾಧ್ಯಮಗಳಲ್ಲಿ 22 ವರ್ಷಗಳ ಹಿಂದೆ ಭಾರಿ ಸುದ್ದಿಯಾಗಿತ್ತು.ಹೀಗೆ ಬಾಲ್ಯದಿಂದ ಈಗಿನವರೆಗೂ ಈತನ ಚಿಕಿತ್ಸೆಗಾಗಿ ಮನೆಯವರು ಲಕ್ಷಾಂತರ ವ್ಯಯ ಮಾಡಿದ್ದಾರೆ.

ಹಲವು ಬಾರಿ ಕಿಡ್ನಿ ಸಮಸ್ಯೆ ಕಂಡು ಬಂದು ಚಿಕಿತ್ಸೆ ಪಡೆದುಕೊಂಡಿದ್ದಾರೆ.ಆದರೆ ಕೆಲ ಸಮಯದಿಂದ ತೀರಾ ಅನಾರೋಗ್ಯ ಎದುರಿಸುತ್ತಿರುವ ಈ ಯುವಕನ ಮನೆಯವರಿಗೆ ಈಗ ಮಗನ ಚಿಕಿತ್ಸೆಗೆ ಹಣ ಹೊಂದಿಸುವುದು ಸವಾಲಿನ ಕೆಲಸವಾಗಿದೆ.ಈಗ ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ವ್ಯಯಿಸಲಾಗಿದ್ದು,ಮುಂದಿನ ಚಿಕಿತ್ಸೆಗೆ ಆರ್ಥಿಕ ಅಡಚಣೆಯಲ್ಲಿದ್ದಾರೆ.  ಇವರು ದಾನಿಗಳು ಆರ್ಥಿಕ ಸಹಕಾರ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಸಹಾಯ ಮಾಡುವ ದಾನಿಗಳು ಈ ಖಾತೆಗೆ ಜಮೆ ಮಾಡುವಂತೆ ಕೋರಿದ್ದಾರೆ. ಸಂಪರ್ಕ ಮೋನಪ್ಪ ಗೌಡ 8496827014, 9980575433

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

8 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

9 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 days ago