ನರಿಮೊಗರು: ಈ ಯುವಕ ನೋಡಲು ಎಲ್ಲರಂತೆಯೇ ಸಾಮಾನ್ಯರಂತೆಯೇ ಕಾಣುತ್ತಾರೆ.ಆದರೆ ಇವರ ಸಮಸ್ಯೆ ಮಾತ್ರ ವಿಶೇಷವಾದದು.ಸುಮಾರು 27 ವರ್ಷ ಪ್ರಾಯದ ಈ ಯುವಕನ ಹೆಸರು ಪುನೀತ್,ನರಿಮೊಗರು ಗ್ರಾಮದ ಕೆದ್ಕಾರು ನಿವಾಸಿ ಮೋನಪ್ಪ ಗೌಡರ ಪುತ್ರ.
ಈ ಯುವಕನಿಗೆ ಹುಟ್ಟುವಾಗಲೇ ಮೂತ್ರಕೋಶ ಹಾಗೆ ಜನನಾಂಗವಿಲ್ಲದೆ ಇದ್ದವರು.ಹೊಕ್ಕಳು ಮೂಲಕ ಮೂತ್ರ ಹೋಗುತ್ತಿದ್ದು,ಶಸ್ತ್ರ ಚಿಕಿತ್ಸೆ ಬಳಿಕ ಹೊರಗಡೆ ಚೀಲ ಜೋಡಿಸಿ ಮೂತ್ರ ಹೋಗುವಂತೆ ಪುನೀತ್ ಆವರು 5 ವರ್ಷದ ಬಾಲಕನಾಗಿದ್ದಾಗ ಮಾಡಲಾಗಿತ್ತು.ಇದು ವೈದ್ಯಕೀಯ ಲೋಕದಲ್ಲೇ ವಿಶೇಷ ಪ್ರಕರಣವೆಂದು ಮಾಧ್ಯಮಗಳಲ್ಲಿ 22 ವರ್ಷಗಳ ಹಿಂದೆ ಭಾರಿ ಸುದ್ದಿಯಾಗಿತ್ತು.ಹೀಗೆ ಬಾಲ್ಯದಿಂದ ಈಗಿನವರೆಗೂ ಈತನ ಚಿಕಿತ್ಸೆಗಾಗಿ ಮನೆಯವರು ಲಕ್ಷಾಂತರ ವ್ಯಯ ಮಾಡಿದ್ದಾರೆ.
ಹಲವು ಬಾರಿ ಕಿಡ್ನಿ ಸಮಸ್ಯೆ ಕಂಡು ಬಂದು ಚಿಕಿತ್ಸೆ ಪಡೆದುಕೊಂಡಿದ್ದಾರೆ.ಆದರೆ ಕೆಲ ಸಮಯದಿಂದ ತೀರಾ ಅನಾರೋಗ್ಯ ಎದುರಿಸುತ್ತಿರುವ ಈ ಯುವಕನ ಮನೆಯವರಿಗೆ ಈಗ ಮಗನ ಚಿಕಿತ್ಸೆಗೆ ಹಣ ಹೊಂದಿಸುವುದು ಸವಾಲಿನ ಕೆಲಸವಾಗಿದೆ.ಈಗ ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ವ್ಯಯಿಸಲಾಗಿದ್ದು,ಮುಂದಿನ ಚಿಕಿತ್ಸೆಗೆ ಆರ್ಥಿಕ ಅಡಚಣೆಯಲ್ಲಿದ್ದಾರೆ. ಇವರು ದಾನಿಗಳು ಆರ್ಥಿಕ ಸಹಕಾರ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಸಹಾಯ ಮಾಡುವ ದಾನಿಗಳು ಈ ಖಾತೆಗೆ ಜಮೆ ಮಾಡುವಂತೆ ಕೋರಿದ್ದಾರೆ. ಸಂಪರ್ಕ ಮೋನಪ್ಪ ಗೌಡ 8496827014, 9980575433
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.