ನರಿಮೊಗರು: ಈ ಯುವಕ ನೋಡಲು ಎಲ್ಲರಂತೆಯೇ ಸಾಮಾನ್ಯರಂತೆಯೇ ಕಾಣುತ್ತಾರೆ.ಆದರೆ ಇವರ ಸಮಸ್ಯೆ ಮಾತ್ರ ವಿಶೇಷವಾದದು.ಸುಮಾರು 27 ವರ್ಷ ಪ್ರಾಯದ ಈ ಯುವಕನ ಹೆಸರು ಪುನೀತ್,ನರಿಮೊಗರು ಗ್ರಾಮದ ಕೆದ್ಕಾರು ನಿವಾಸಿ ಮೋನಪ್ಪ ಗೌಡರ ಪುತ್ರ.
ಈ ಯುವಕನಿಗೆ ಹುಟ್ಟುವಾಗಲೇ ಮೂತ್ರಕೋಶ ಹಾಗೆ ಜನನಾಂಗವಿಲ್ಲದೆ ಇದ್ದವರು.ಹೊಕ್ಕಳು ಮೂಲಕ ಮೂತ್ರ ಹೋಗುತ್ತಿದ್ದು,ಶಸ್ತ್ರ ಚಿಕಿತ್ಸೆ ಬಳಿಕ ಹೊರಗಡೆ ಚೀಲ ಜೋಡಿಸಿ ಮೂತ್ರ ಹೋಗುವಂತೆ ಪುನೀತ್ ಆವರು 5 ವರ್ಷದ ಬಾಲಕನಾಗಿದ್ದಾಗ ಮಾಡಲಾಗಿತ್ತು.ಇದು ವೈದ್ಯಕೀಯ ಲೋಕದಲ್ಲೇ ವಿಶೇಷ ಪ್ರಕರಣವೆಂದು ಮಾಧ್ಯಮಗಳಲ್ಲಿ 22 ವರ್ಷಗಳ ಹಿಂದೆ ಭಾರಿ ಸುದ್ದಿಯಾಗಿತ್ತು.ಹೀಗೆ ಬಾಲ್ಯದಿಂದ ಈಗಿನವರೆಗೂ ಈತನ ಚಿಕಿತ್ಸೆಗಾಗಿ ಮನೆಯವರು ಲಕ್ಷಾಂತರ ವ್ಯಯ ಮಾಡಿದ್ದಾರೆ.
ಹಲವು ಬಾರಿ ಕಿಡ್ನಿ ಸಮಸ್ಯೆ ಕಂಡು ಬಂದು ಚಿಕಿತ್ಸೆ ಪಡೆದುಕೊಂಡಿದ್ದಾರೆ.ಆದರೆ ಕೆಲ ಸಮಯದಿಂದ ತೀರಾ ಅನಾರೋಗ್ಯ ಎದುರಿಸುತ್ತಿರುವ ಈ ಯುವಕನ ಮನೆಯವರಿಗೆ ಈಗ ಮಗನ ಚಿಕಿತ್ಸೆಗೆ ಹಣ ಹೊಂದಿಸುವುದು ಸವಾಲಿನ ಕೆಲಸವಾಗಿದೆ.ಈಗ ಅನಾರೋಗ್ಯದಿಂದಾಗಿ ಚಿಕಿತ್ಸೆಗಾಗಿ ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈಗಾಗಲೇ ಚಿಕಿತ್ಸೆಗಾಗಿ ಲಕ್ಷಾಂತರ ವ್ಯಯಿಸಲಾಗಿದ್ದು,ಮುಂದಿನ ಚಿಕಿತ್ಸೆಗೆ ಆರ್ಥಿಕ ಅಡಚಣೆಯಲ್ಲಿದ್ದಾರೆ. ಇವರು ದಾನಿಗಳು ಆರ್ಥಿಕ ಸಹಕಾರ ನೀಡುವಂತೆ ವಿನಂತಿಸಿಕೊಂಡಿದ್ದಾರೆ.
ಸಹಾಯ ಮಾಡುವ ದಾನಿಗಳು ಈ ಖಾತೆಗೆ ಜಮೆ ಮಾಡುವಂತೆ ಕೋರಿದ್ದಾರೆ. ಸಂಪರ್ಕ ಮೋನಪ್ಪ ಗೌಡ 8496827014, 9980575433
ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…
2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…
ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…
ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…
ಬಕ್ರೀದ್ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…
ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…