Advertisement
ಸುದ್ದಿಗಳು

ಅಸ್ತಂಗತರಾದ ಗೋಳ್ತಜೆ ಸದಾಶಿವ ಮಾಸ್ಟ್ರು……. ನುಡಿನಮನ

Share

ಧರ್ಮಪತ್ನಿ ಲಕ್ಷ್ಮೀ ಅಮ್ಮ, ಜೇಷ್ಟ ಪುತ್ರ ಡಾಕ್ಟರ್ ಈಶ್ವರಯ್ಯ ಅವರನ್ನೊಳಗೊಂಡಂತೆ ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಮತ್ತು ಅಪಾರ ಬಂಧು, ಅಭಿಮಾನಿ ಬಳಗಕ್ಕೆ ನೆನಪುಗಳ ಮಧುರ ಭಾವಗಳನ್ನು ಬಿಟ್ಟು ತನ್ನ ಎಂಬತ್ತೊಂಬತ್ತನೇ ಹರೆಯದಲ್ಲಿ ಕಲ್ಮಡ್ಕ ಗ್ರಾಮದ ಗೋಳ್ತಜೆ ಸದಾಶಿವಯ್ಯನವರು ಇಹಲೋಕ ಯಾತ್ರೆ ಮುಗಿಸಿದರು.

ಸುಳ್ಯ ತಾಲೂಕಿನ ಶೇಣಿಯಲ್ಲಿ ಶಾಲಾ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ಸದಾಶಿವಯ್ಯನವರು ಕಲ್ಮಡ್ಕ ಶಾಲೆಯಲ್ಲಿ ಅದ್ಯಾಪನಾ ಪ್ರವೃತ್ತಿಯನ್ನು ಮುಂದುವರಿಸಿ ನಿವೃತ್ತಿ ಹೊಂದಿ ಅದ್ಯಾಪಕರೆಂದರೆ ಹೇಗಿರಬೇಕೆಂದು ಮಾದರಿಯಾದವರು. ನೇರ ನಡೆ ನುಡಿಯವರಾದ ಸದಾಶಿವಯ್ಯನವರು ಹಿರಿಯ ಕಿರಿಯರೆನ್ನದೇ ಎಲ್ಲರೊಡನೆ ಆತ್ಮೀಯವಾಗಿ ಬೆರೆತು ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು. ಅಧ್ಯಾಪನ ವೃತ್ತಿಯಂತೆಯೇ,ಕೃಷಿಯಲ್ಲೂ ಅಪಾರ ಅನುಭವ ಮತ್ತು ಪ್ರೀತಿ ಹೊಂದಿದ್ದರು.ಯುವಕರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸುವ ಮನೋಧರ್ಮ ಇವರದಾಗಿತ್ತು.ತಮ್ಮ ಇಳಿ ವಯಸ್ಸಿನಲ್ಲೂ ತಮ್ಮೂರು ಕಲ್ಮಡ್ಕದ ಶಾಲೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದಲ್ಲಿ ಹಾಜರಿದ್ದು ಮಕ್ಕಳಲ್ಲಿ ಮತ್ತು ಸಭಿಕರಲ್ಲಿ ದೇಶಪ್ರೇಮದ ಜಾಗೃತಿ ಮೂಡಿಸುತ್ತಿದ್ದರು. ಧಾರ್ಮಿಕವಾಗಿ ನೋಡಿದರೆ ಇವರು ಹವ್ಯಕ ಸಮುದಾಯದ ಪರಂಪರಾಗತ ಗುರಿಕ್ಕಾರರು. ಗುರಿಕ್ಕಾರರಾಗಿ ನಿಖರವಾದ ವಿಚಾರಗಳನ್ನು ಮಂಡಿಸಿ ಸಂಪ್ರದಾಯಗಳನ್ನು ಅನುಸರಿಸಿ ಪಾಲಿಸಿ ತಮ್ಮೊಡನೆ ಸಮಾಜವನ್ನು ಕೊಂಡೊಯ್ಯುತ್ತಿದ್ದರು. ಇಂತಹ ವಿಶಿಷ್ಟ ಚೇತನ ಇಂದು ಲೌಕಿಕವಾಗಿ ಮರೆಯಾದರೂ ಅವರ ನಡೆ ನುಡಿ,ಪ್ರೀತಿಯ ಸೆಲೆಗಳು ಸದಾ ಚಿರಾಯು.

ಕವಿ ಗೋಪಾಲಕೃಷ್ಣ ಅಡಿಗರ ಕವಿತೆ……

“ನನ್ನ ದೇಹದ ಬೂದಿ ಗಾಳಿಯಲಿ ತೂರಿಬಿಡಿ
ಹೋಗಿ ಬೀಳಲಿ ಬತ್ತ ಬೆಳೆಯುವಲ್ಲಿ.
ಬೂದಿ ಗೊಬ್ಬರದಿಂದ ತೆನೆಯೊಂದು ನೆಗೆದು ಬರೆ ಧನ್ಯವಾಯಿತು
ಹುಟ್ಟು ಸಾವಿನಲ್ಲಿ……….”

….. ಎಂಬಂತೆ ಅವರೆರೆದ ಅಕ್ಷರ ಸಾರ ಸದಾ ಜ್ಞಾನದ ಪೈರಾಗಿ ಅಮರವಾಗಿ ಜಗವ ಬೆಳಗೀತು,ಸುಜ್ಞಾನ ಸೇತುವಾಗಿ ಮತ್ತೊಮ್ಮೆ ಉದಿಸಿ ಬನ್ನೀ ……

ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

3 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

1 day ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

1 day ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

1 day ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago