Advertisement
ಸುದ್ದಿಗಳು

ಅಸ್ತಂಗತರಾದ ಗೋಳ್ತಜೆ ಸದಾಶಿವ ಮಾಸ್ಟ್ರು……. ನುಡಿನಮನ

Share

ಧರ್ಮಪತ್ನಿ ಲಕ್ಷ್ಮೀ ಅಮ್ಮ, ಜೇಷ್ಟ ಪುತ್ರ ಡಾಕ್ಟರ್ ಈಶ್ವರಯ್ಯ ಅವರನ್ನೊಳಗೊಂಡಂತೆ ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಮತ್ತು ಅಪಾರ ಬಂಧು, ಅಭಿಮಾನಿ ಬಳಗಕ್ಕೆ ನೆನಪುಗಳ ಮಧುರ ಭಾವಗಳನ್ನು ಬಿಟ್ಟು ತನ್ನ ಎಂಬತ್ತೊಂಬತ್ತನೇ ಹರೆಯದಲ್ಲಿ ಕಲ್ಮಡ್ಕ ಗ್ರಾಮದ ಗೋಳ್ತಜೆ ಸದಾಶಿವಯ್ಯನವರು ಇಹಲೋಕ ಯಾತ್ರೆ ಮುಗಿಸಿದರು.

Advertisement
Advertisement

ಸುಳ್ಯ ತಾಲೂಕಿನ ಶೇಣಿಯಲ್ಲಿ ಶಾಲಾ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ಸದಾಶಿವಯ್ಯನವರು ಕಲ್ಮಡ್ಕ ಶಾಲೆಯಲ್ಲಿ ಅದ್ಯಾಪನಾ ಪ್ರವೃತ್ತಿಯನ್ನು ಮುಂದುವರಿಸಿ ನಿವೃತ್ತಿ ಹೊಂದಿ ಅದ್ಯಾಪಕರೆಂದರೆ ಹೇಗಿರಬೇಕೆಂದು ಮಾದರಿಯಾದವರು. ನೇರ ನಡೆ ನುಡಿಯವರಾದ ಸದಾಶಿವಯ್ಯನವರು ಹಿರಿಯ ಕಿರಿಯರೆನ್ನದೇ ಎಲ್ಲರೊಡನೆ ಆತ್ಮೀಯವಾಗಿ ಬೆರೆತು ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು. ಅಧ್ಯಾಪನ ವೃತ್ತಿಯಂತೆಯೇ,ಕೃಷಿಯಲ್ಲೂ ಅಪಾರ ಅನುಭವ ಮತ್ತು ಪ್ರೀತಿ ಹೊಂದಿದ್ದರು.ಯುವಕರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸುವ ಮನೋಧರ್ಮ ಇವರದಾಗಿತ್ತು.ತಮ್ಮ ಇಳಿ ವಯಸ್ಸಿನಲ್ಲೂ ತಮ್ಮೂರು ಕಲ್ಮಡ್ಕದ ಶಾಲೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದಲ್ಲಿ ಹಾಜರಿದ್ದು ಮಕ್ಕಳಲ್ಲಿ ಮತ್ತು ಸಭಿಕರಲ್ಲಿ ದೇಶಪ್ರೇಮದ ಜಾಗೃತಿ ಮೂಡಿಸುತ್ತಿದ್ದರು. ಧಾರ್ಮಿಕವಾಗಿ ನೋಡಿದರೆ ಇವರು ಹವ್ಯಕ ಸಮುದಾಯದ ಪರಂಪರಾಗತ ಗುರಿಕ್ಕಾರರು. ಗುರಿಕ್ಕಾರರಾಗಿ ನಿಖರವಾದ ವಿಚಾರಗಳನ್ನು ಮಂಡಿಸಿ ಸಂಪ್ರದಾಯಗಳನ್ನು ಅನುಸರಿಸಿ ಪಾಲಿಸಿ ತಮ್ಮೊಡನೆ ಸಮಾಜವನ್ನು ಕೊಂಡೊಯ್ಯುತ್ತಿದ್ದರು. ಇಂತಹ ವಿಶಿಷ್ಟ ಚೇತನ ಇಂದು ಲೌಕಿಕವಾಗಿ ಮರೆಯಾದರೂ ಅವರ ನಡೆ ನುಡಿ,ಪ್ರೀತಿಯ ಸೆಲೆಗಳು ಸದಾ ಚಿರಾಯು.

ಕವಿ ಗೋಪಾಲಕೃಷ್ಣ ಅಡಿಗರ ಕವಿತೆ……

“ನನ್ನ ದೇಹದ ಬೂದಿ ಗಾಳಿಯಲಿ ತೂರಿಬಿಡಿ
ಹೋಗಿ ಬೀಳಲಿ ಬತ್ತ ಬೆಳೆಯುವಲ್ಲಿ.
ಬೂದಿ ಗೊಬ್ಬರದಿಂದ ತೆನೆಯೊಂದು ನೆಗೆದು ಬರೆ ಧನ್ಯವಾಯಿತು
ಹುಟ್ಟು ಸಾವಿನಲ್ಲಿ……….”

….. ಎಂಬಂತೆ ಅವರೆರೆದ ಅಕ್ಷರ ಸಾರ ಸದಾ ಜ್ಞಾನದ ಪೈರಾಗಿ ಅಮರವಾಗಿ ಜಗವ ಬೆಳಗೀತು,ಸುಜ್ಞಾನ ಸೇತುವಾಗಿ ಮತ್ತೊಮ್ಮೆ ಉದಿಸಿ ಬನ್ನೀ ……

ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

16 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

2 days ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

2 days ago