Advertisement
ಸುದ್ದಿಗಳು

ಅಸ್ತಂಗತರಾದ ಗೋಳ್ತಜೆ ಸದಾಶಿವ ಮಾಸ್ಟ್ರು……. ನುಡಿನಮನ

Share

ಧರ್ಮಪತ್ನಿ ಲಕ್ಷ್ಮೀ ಅಮ್ಮ, ಜೇಷ್ಟ ಪುತ್ರ ಡಾಕ್ಟರ್ ಈಶ್ವರಯ್ಯ ಅವರನ್ನೊಳಗೊಂಡಂತೆ ಮೂವರು ಪುತ್ರರು ಮತ್ತು ನಾಲ್ವರು ಪುತ್ರಿಯರು ಮತ್ತು ಅಪಾರ ಬಂಧು, ಅಭಿಮಾನಿ ಬಳಗಕ್ಕೆ ನೆನಪುಗಳ ಮಧುರ ಭಾವಗಳನ್ನು ಬಿಟ್ಟು ತನ್ನ ಎಂಬತ್ತೊಂಬತ್ತನೇ ಹರೆಯದಲ್ಲಿ ಕಲ್ಮಡ್ಕ ಗ್ರಾಮದ ಗೋಳ್ತಜೆ ಸದಾಶಿವಯ್ಯನವರು ಇಹಲೋಕ ಯಾತ್ರೆ ಮುಗಿಸಿದರು.

ಸುಳ್ಯ ತಾಲೂಕಿನ ಶೇಣಿಯಲ್ಲಿ ಶಾಲಾ ಅಧ್ಯಾಪಕರಾಗಿ ವೃತ್ತಿ ಆರಂಭಿಸಿದ ಸದಾಶಿವಯ್ಯನವರು ಕಲ್ಮಡ್ಕ ಶಾಲೆಯಲ್ಲಿ ಅದ್ಯಾಪನಾ ಪ್ರವೃತ್ತಿಯನ್ನು ಮುಂದುವರಿಸಿ ನಿವೃತ್ತಿ ಹೊಂದಿ ಅದ್ಯಾಪಕರೆಂದರೆ ಹೇಗಿರಬೇಕೆಂದು ಮಾದರಿಯಾದವರು. ನೇರ ನಡೆ ನುಡಿಯವರಾದ ಸದಾಶಿವಯ್ಯನವರು ಹಿರಿಯ ಕಿರಿಯರೆನ್ನದೇ ಎಲ್ಲರೊಡನೆ ಆತ್ಮೀಯವಾಗಿ ಬೆರೆತು ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದರು. ಅಧ್ಯಾಪನ ವೃತ್ತಿಯಂತೆಯೇ,ಕೃಷಿಯಲ್ಲೂ ಅಪಾರ ಅನುಭವ ಮತ್ತು ಪ್ರೀತಿ ಹೊಂದಿದ್ದರು.ಯುವಕರನ್ನು ಬೆನ್ನು ತಟ್ಟಿ ಪ್ರೋತ್ಸಾಹಿಸುವ ಮನೋಧರ್ಮ ಇವರದಾಗಿತ್ತು.ತಮ್ಮ ಇಳಿ ವಯಸ್ಸಿನಲ್ಲೂ ತಮ್ಮೂರು ಕಲ್ಮಡ್ಕದ ಶಾಲೆಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವದಲ್ಲಿ ಹಾಜರಿದ್ದು ಮಕ್ಕಳಲ್ಲಿ ಮತ್ತು ಸಭಿಕರಲ್ಲಿ ದೇಶಪ್ರೇಮದ ಜಾಗೃತಿ ಮೂಡಿಸುತ್ತಿದ್ದರು. ಧಾರ್ಮಿಕವಾಗಿ ನೋಡಿದರೆ ಇವರು ಹವ್ಯಕ ಸಮುದಾಯದ ಪರಂಪರಾಗತ ಗುರಿಕ್ಕಾರರು. ಗುರಿಕ್ಕಾರರಾಗಿ ನಿಖರವಾದ ವಿಚಾರಗಳನ್ನು ಮಂಡಿಸಿ ಸಂಪ್ರದಾಯಗಳನ್ನು ಅನುಸರಿಸಿ ಪಾಲಿಸಿ ತಮ್ಮೊಡನೆ ಸಮಾಜವನ್ನು ಕೊಂಡೊಯ್ಯುತ್ತಿದ್ದರು. ಇಂತಹ ವಿಶಿಷ್ಟ ಚೇತನ ಇಂದು ಲೌಕಿಕವಾಗಿ ಮರೆಯಾದರೂ ಅವರ ನಡೆ ನುಡಿ,ಪ್ರೀತಿಯ ಸೆಲೆಗಳು ಸದಾ ಚಿರಾಯು.

ಕವಿ ಗೋಪಾಲಕೃಷ್ಣ ಅಡಿಗರ ಕವಿತೆ……

“ನನ್ನ ದೇಹದ ಬೂದಿ ಗಾಳಿಯಲಿ ತೂರಿಬಿಡಿ
ಹೋಗಿ ಬೀಳಲಿ ಬತ್ತ ಬೆಳೆಯುವಲ್ಲಿ.
ಬೂದಿ ಗೊಬ್ಬರದಿಂದ ತೆನೆಯೊಂದು ನೆಗೆದು ಬರೆ ಧನ್ಯವಾಯಿತು
ಹುಟ್ಟು ಸಾವಿನಲ್ಲಿ……….”

….. ಎಂಬಂತೆ ಅವರೆರೆದ ಅಕ್ಷರ ಸಾರ ಸದಾ ಜ್ಞಾನದ ಪೈರಾಗಿ ಅಮರವಾಗಿ ಜಗವ ಬೆಳಗೀತು,ಸುಜ್ಞಾನ ಸೇತುವಾಗಿ ಮತ್ತೊಮ್ಮೆ ಉದಿಸಿ ಬನ್ನೀ ……

ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

‌ ಪ್ರಗತಿಪರ ಕೃಷಿಕ, ಬರಹಗಾರ

Published by
ಟಿ ಆರ್ ಸುರೇಶ್ಚಂದ್ರ ತೊಟ್ಟೆತ್ತೋಡಿ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

15 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

21 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago