ಅಸ್ಸಾಂನಲ್ಲಿ ಭೀಕರ ಮಳೆ- ಪ್ರವಾಹ | 107 ಮಂದಿ ಪ್ರವಾಹಕ್ಕೆ ಬಲಿ |

July 19, 2020
9:08 PM

ಅಸ್ಸಾಂ: ಭಾರೀ ಮಳೆಯಿಂದ ಅಸ್ಸಾಂ ರಾಜ್ಯ ತತ್ತರಿಸಿದೆ. ಭಾರೀ ಮಳೆಯಿಂದ ಪ್ರವಾಹ ಸ್ಥಿತಿ ಉಂಟಾಗಿದ್ದು  ಇದುವರೆಗೆ  107 ಜನರು ಮೃತಪಟ್ಟಿದ್ದಾರೆ. ಪ್ರವಾಹದ ಹೊಡೆತಕ್ಕೆ  ಕಾಡು ಪ್ರಾಣಿಗಳೂ ಕೂಡ ಸಾವನ್ನಪ್ಪಿವೆ ಎಂದು ಸರ್ಕಾರದ ವರದಿ ತಿಳಿಸಿದೆ.

ಅಸ್ಸಾಂನ 30 ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ.  ನೆರೆಯಿಂದಾಗಿ ಭೂ ಕುಸಿತ ಉಂಟಾಗಿ  26 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲಾಡಳಿತದೊಂದಿಗೆ ರಾಜ್ಯ ವಿಪತ್ತು ದಳದ ಸಿಬ್ಬಂದಿ 2,389 ಜನರನ್ನು ರಕ್ಷಿಸಲಾಗಿದೆ. ಪ್ರಸ್ತುತ ಅಸ್ಸಾಂನ 3,014 ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿದ್ದು, 1,27,955,33 ಹೆಕ್ಟೇರ್‌ ಕೃಷಿ ಭೂಮಿ ನೀರಿನಿಂದ ಜಲಾವೃತಗೊಂಡಿದೆ. 487 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1.25 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.

ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮುಳುಗಡೆಯಾಗಿದ್ದು, 76 ಪ್ರಾಣಿಗಳು ಮೃತಪಟ್ಟಿವೆ. 170 ಪ್ರಾಣಿಗಳನ್ನು ರಕ್ಷಿಸಲಾಗಿದೆ. ಖಡ್ಗಮೃಗಗಳ ಮುಖ್ಯ ಆವಾಸ ಸ್ಥಾನ ಎನಿಸಿರುವ ಉದ್ಯಾನದಲ್ಲಿ ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿವೆ.  82 ಕೃಷ್ಣಮೃಗಗಳು ಸಾವನ್ನಪ್ಪಿವೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ
September 2, 2026
7:49 AM
by: ದ ರೂರಲ್ ಮಿರರ್.ಕಾಂ
E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!
September 1, 2026
10:37 PM
by: ದ ರೂರಲ್ ಮಿರರ್.ಕಾಂ
ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ
September 1, 2026
3:16 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?
September 1, 2026
3:10 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror