ಅಸ್ಸಾಂ: ಭಾರೀ ಮಳೆಯಿಂದ ಅಸ್ಸಾಂ ರಾಜ್ಯ ತತ್ತರಿಸಿದೆ. ಭಾರೀ ಮಳೆಯಿಂದ ಪ್ರವಾಹ ಸ್ಥಿತಿ ಉಂಟಾಗಿದ್ದು ಇದುವರೆಗೆ 107 ಜನರು ಮೃತಪಟ್ಟಿದ್ದಾರೆ. ಪ್ರವಾಹದ ಹೊಡೆತಕ್ಕೆ ಕಾಡು ಪ್ರಾಣಿಗಳೂ ಕೂಡ ಸಾವನ್ನಪ್ಪಿವೆ ಎಂದು ಸರ್ಕಾರದ ವರದಿ ತಿಳಿಸಿದೆ.
ಅಸ್ಸಾಂನ 30 ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ನೆರೆಯಿಂದಾಗಿ ಭೂ ಕುಸಿತ ಉಂಟಾಗಿ 26 ಮಂದಿ ಸಾವಿಗೀಡಾಗಿದ್ದಾರೆ ಎಂದು ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ಕಳೆದ 24 ಗಂಟೆಗಳಲ್ಲಿ ಜಿಲ್ಲಾಡಳಿತದೊಂದಿಗೆ ರಾಜ್ಯ ವಿಪತ್ತು ದಳದ ಸಿಬ್ಬಂದಿ 2,389 ಜನರನ್ನು ರಕ್ಷಿಸಲಾಗಿದೆ. ಪ್ರಸ್ತುತ ಅಸ್ಸಾಂನ 3,014 ಗ್ರಾಮಗಳು ನೀರಿನಲ್ಲಿ ಮುಳುಗಡೆಯಾಗಿದ್ದು, 1,27,955,33 ಹೆಕ್ಟೇರ್ ಕೃಷಿ ಭೂಮಿ ನೀರಿನಿಂದ ಜಲಾವೃತಗೊಂಡಿದೆ. 487 ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದ್ದು, 1.25 ಲಕ್ಷ ಜನರು ಆಶ್ರಯ ಪಡೆದಿದ್ದಾರೆ.
ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನ ಮುಳುಗಡೆಯಾಗಿದ್ದು, 76 ಪ್ರಾಣಿಗಳು ಮೃತಪಟ್ಟಿವೆ. 170 ಪ್ರಾಣಿಗಳನ್ನು ರಕ್ಷಿಸಲಾಗಿದೆ. ಖಡ್ಗಮೃಗಗಳ ಮುಖ್ಯ ಆವಾಸ ಸ್ಥಾನ ಎನಿಸಿರುವ ಉದ್ಯಾನದಲ್ಲಿ ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕಿವೆ. 82 ಕೃಷ್ಣಮೃಗಗಳು ಸಾವನ್ನಪ್ಪಿವೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…