ಸುದ್ದಿಗಳು

ಅ‌.2 ರಂದು ಜನಜಾಗೃತಿ ವೇದಿಕೆಯ ವತಿಯಿಂದ ವ್ಯಸನಮುಕ್ತರ ಸಮಾವೇಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ‌.ಟ್ರಸ್ಟ್ ಸುಳ್ಯ ತಾಲೂಕು, ನವಜೀವನ ಸಮಿತಿ ಸುಳ್ಯ, ಹಾಗೂ ಪ್ರಗತಿಬಂಧು ಸ್ವಸಹಾಯ ಒಕ್ಕೂಟ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮೃತಿ ಪ್ರಯುಕ್ತ ವ್ಯಸನಮುಕ್ತರ ಸಮಾವೇಶ ಅ.2ರಂದು ಮಧ್ಯಾಹ್ನ 2 ಗಂಟೆಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ಶ್ರೀ ಶಾರದಾಂಬಾ ವೇದಿಕೆಯಲ್ಲಿ ನಡೆಯಲಿದೆ ಎಂದು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಳಂಜ ವಿಶ್ವನಾಥ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

ಗಾಂಧಿ ಜಯಂತಿ ದಿನ ಬೆಳಿಗ್ಗೆ ಜನಜಾಗೃತಿ ವೇದಿಕೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 151 ಕಡೆ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ವ್ಯಸನಮುಕ್ತರ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರಿಗೆ ಮಾಹಿತಿ ಮಾರ್ಗದರ್ಶನ ನಡೆಯಲಿದೆ. ಮದ್ಯವರ್ಜನ ಶಿಬಿರಗಳ ಮೂಲಕ ವ್ಯಸನ ಮುಕ್ತರಾದವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಪಾನಮುಕ್ತ ತಾಲೂಕಿಗೆ ಹಕ್ಕೊತ್ತಾಯ ನಿರ್ಣಯವನ್ನು ಕೈಗೊಳ್ಳಲಾಗುವುದು. ಶಾಸಕ ಎಸ್‌.ಅಂಗಾರ ಉದ್ಘಾಟಿಸುವರು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್, ಪರಿವಾರಕಾನ ಮದರ್ ತೆರೇಸಾ ಚರ್ಚ್ ನ ಫಾ.ಜೋಸೆಫ್ ಪುದಕುಯಿಲ್, ತಾಜುಲ್ ಹುದಾ ಎಜ್ಯುಕೇಶನ್ ಟ್ತಸ್ಟ್ ಅಧ್ಯಕ್ಷ ಕೆ.ವಿ.ನೂರುದ್ದೀನ್ ಝುಹರಿ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

 

ದುಶ್ಚಟಮುಕ್ತ ಸಮಾಜಕ್ಕಾಗಿ ವಿಶೇಷ ಕಾರ್ಯಕ್ರಮ:

Advertisement

ಇದುವರೆಗೆ ತಾಲೂಕಿನಲ್ಲಿ 57 ಮದ್ಯವರ್ಜನ ಶಿಬಿರಗಳು ಆಯೋಜಿಸಿದ್ದು 3314 ಮಂದಿ ಶಿಬಿರದಲ್ಲಿ ಭಾಗವಹಿಸಿ ಪಾನಮುಕ್ತರಾಗಿದ್ದಾರೆ. ಈ ವರ್ಷ ವಿಶೇಷವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಯುವ ಜನತೆಗೆ ಶಾಲಾ ಕಾಲೇಜುಗಳಲ್ಲಿ ಮಾಹಿತಿಯನ್ನು ನೀಡುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸ್ವಾಸ್ಥ್ಯ ಸಂಕಲ್ಪ ಕ್ಲಬ್ ಉದ್ಘಾಟಿಸಲಾಗುವುದು. ನವಜೀವನ ಸಮಿತಿಯ ಬಲವರ್ಧನೆ, ಸ್ವ ಉದ್ಯೋಗದ ಚಿಂತನೆ ನಡೆಸಲಾಗುವುದು. ನವಜೀವನ ಸಮಿತಿಯವರಿಗೆ ಪ್ರೇರಣಾ ಶಿಬಿರ, ಭಜನೋತ್ಸವ, ಕ್ರೀಡಾಕೂಟ ಮತ್ತು ಸಮಿತಿಯವರಿಂದ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಜನಜಾಗೃತಿ ವೇದಿಕೆಯ ತಾಲೂಕು ಕೋಶಾಧಿಕಾರಿ ಲೋಕನಾಥ್ ಅಮೆಚೂರ್, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಬೆಳ್ಳಾರೆ ವಲಯಾಧ್ಯಕ್ಷ ಕೂಸಪ್ಪ ಗೌಡ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

3 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

3 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

3 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

3 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

13 hours ago