Advertisement
ಸುದ್ದಿಗಳು

ಅ‌.2 ರಂದು ಜನಜಾಗೃತಿ ವೇದಿಕೆಯ ವತಿಯಿಂದ ವ್ಯಸನಮುಕ್ತರ ಸಮಾವೇಶ

Share

ಸುಳ್ಯ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸುಳ್ಯ ತಾಲೂಕು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ‌.ಟ್ರಸ್ಟ್ ಸುಳ್ಯ ತಾಲೂಕು, ನವಜೀವನ ಸಮಿತಿ ಸುಳ್ಯ, ಹಾಗೂ ಪ್ರಗತಿಬಂಧು ಸ್ವಸಹಾಯ ಒಕ್ಕೂಟ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆಯ ಅಂಗವಾಗಿ ದುಶ್ಚಟಮುಕ್ತ ಸಮಾಜ ನಿರ್ಮಾಣಕ್ಕಾಗಿ ಗಾಂಧೀ ಸ್ಮೃತಿ ಪ್ರಯುಕ್ತ ವ್ಯಸನಮುಕ್ತರ ಸಮಾವೇಶ ಅ.2ರಂದು ಮಧ್ಯಾಹ್ನ 2 ಗಂಟೆಯಿಂದ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗ ಶ್ರೀ ಶಾರದಾಂಬಾ ವೇದಿಕೆಯಲ್ಲಿ ನಡೆಯಲಿದೆ ಎಂದು ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಕಳಂಜ ವಿಶ್ವನಾಥ ರೈ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

Advertisement
Advertisement

ಗಾಂಧಿ ಜಯಂತಿ ದಿನ ಬೆಳಿಗ್ಗೆ ಜನಜಾಗೃತಿ ವೇದಿಕೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 151 ಕಡೆ ಏಕಕಾಲದಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ 2 ಗಂಟೆಗೆ ವ್ಯಸನಮುಕ್ತರ ಸಮಾವೇಶ ಮತ್ತು ನವಜೀವನ ಸಮಿತಿ ಸದಸ್ಯರಿಗೆ ಮಾಹಿತಿ ಮಾರ್ಗದರ್ಶನ ನಡೆಯಲಿದೆ. ಮದ್ಯವರ್ಜನ ಶಿಬಿರಗಳ ಮೂಲಕ ವ್ಯಸನ ಮುಕ್ತರಾದವರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

Advertisement

ಪಾನಮುಕ್ತ ತಾಲೂಕಿಗೆ ಹಕ್ಕೊತ್ತಾಯ ನಿರ್ಣಯವನ್ನು ಕೈಗೊಳ್ಳಲಾಗುವುದು. ಶಾಸಕ ಎಸ್‌.ಅಂಗಾರ ಉದ್ಘಾಟಿಸುವರು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸತೀಶ್ ಶೆಟ್ಟಿ, ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದ ಅಧ್ಯಕ್ಷ ಪುರೋಹಿತ ನಾಗರಾಜ ಭಟ್, ಪರಿವಾರಕಾನ ಮದರ್ ತೆರೇಸಾ ಚರ್ಚ್ ನ ಫಾ.ಜೋಸೆಫ್ ಪುದಕುಯಿಲ್, ತಾಜುಲ್ ಹುದಾ ಎಜ್ಯುಕೇಶನ್ ಟ್ತಸ್ಟ್ ಅಧ್ಯಕ್ಷ ಕೆ.ವಿ.ನೂರುದ್ದೀನ್ ಝುಹರಿ, ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಹರಪ್ರಸಾದ್ ತುದಿಯಡ್ಕ ಮತ್ತಿತರರು ಭಾಗವಹಿಸಲಿದ್ದಾರೆ ಎಂದರು.

 

Advertisement

ದುಶ್ಚಟಮುಕ್ತ ಸಮಾಜಕ್ಕಾಗಿ ವಿಶೇಷ ಕಾರ್ಯಕ್ರಮ:

ಇದುವರೆಗೆ ತಾಲೂಕಿನಲ್ಲಿ 57 ಮದ್ಯವರ್ಜನ ಶಿಬಿರಗಳು ಆಯೋಜಿಸಿದ್ದು 3314 ಮಂದಿ ಶಿಬಿರದಲ್ಲಿ ಭಾಗವಹಿಸಿ ಪಾನಮುಕ್ತರಾಗಿದ್ದಾರೆ. ಈ ವರ್ಷ ವಿಶೇಷವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ನಿಟ್ಟಿನಲ್ಲಿ ಯುವ ಜನತೆಗೆ ಶಾಲಾ ಕಾಲೇಜುಗಳಲ್ಲಿ ಮಾಹಿತಿಯನ್ನು ನೀಡುವ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಸ್ವಾಸ್ಥ್ಯ ಸಂಕಲ್ಪ ಕ್ಲಬ್ ಉದ್ಘಾಟಿಸಲಾಗುವುದು. ನವಜೀವನ ಸಮಿತಿಯ ಬಲವರ್ಧನೆ, ಸ್ವ ಉದ್ಯೋಗದ ಚಿಂತನೆ ನಡೆಸಲಾಗುವುದು. ನವಜೀವನ ಸಮಿತಿಯವರಿಗೆ ಪ್ರೇರಣಾ ಶಿಬಿರ, ಭಜನೋತ್ಸವ, ಕ್ರೀಡಾಕೂಟ ಮತ್ತು ಸಮಿತಿಯವರಿಂದ ಗ್ರಾಮ ಸುಭಿಕ್ಷಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಅವರು ವಿವರಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಎನ್.ಎ.ರಾಮಚಂದ್ರ, ಜನಜಾಗೃತಿ ವೇದಿಕೆಯ ತಾಲೂಕು ಕೋಶಾಧಿಕಾರಿ ಲೋಕನಾಥ್ ಅಮೆಚೂರ್, ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಬೆಳ್ಳಾರೆ ವಲಯಾಧ್ಯಕ್ಷ ಕೂಸಪ್ಪ ಗೌಡ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

Karnataka Weather | 18-05-2024 | ರಾಜ್ಯದ ಹಲವು ಕಡೆ ಮಳೆ | ವಾಯುಭಾರ ಕುಸಿತದ ಲಕ್ಷಣ | ವಾಯುಭಾರ ಕುಸಿತದ ಪ್ರಭಲತೆಯ ಮೇಲೆ ಮುಂಗಾರು ಪರಿಣಾಮ |

ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.

15 hours ago

ಜಾಗತಿಕ ಮಟ್ಟದಲ್ಲಿ ಭಾರತದ ಪ್ರತಿಭೆ ಮತ್ತು ಕೌಶಲ್ಯಕ್ಕೆ ಬಹುಬೇಡಿಕೆ: ಸಚಿವ ಎಸ್. ಜೈಶಂಕರ್

''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…

15 hours ago

ರಾಜ್ಯದ ಹಲವೆಡೆ ಮಳೆ | ತಂಪಾದ ಬರದ ನೆಲ | ಸಿಡಿಲು ಬಡಿದು ಬಾಲಕಿ ಸಾವು

ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…

16 hours ago

ಸತ್ಯ……..ಸತ್ಯದ ಹುಡುಕಾಟ ನಿಮ್ಮ ಆದ್ಯತೆಯಾಗಿರಲಿ……..

ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.

16 hours ago

ಉದ್ಯಮಿ ಮುಕೇಶ್ ​ಅಂಬಾನಿಯ ಪ್ರತಿ ಗಂಟೆಯ ಗಳಿಕೆ ಎಷ್ಟು..? | ಅಂಬಾನಿ ಸಂಭಾವನೆ ಎಷ್ಟು ಗೊತ್ತಾ?

 ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್‌ ಇಂಡಸ್ಟ್ರೀಸ್‌(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…

16 hours ago

ಕೃಷಿಯಲ್ಲಿ ಯುವ ರೈತನ ಸಾಧನೆ | 200 ರೂ. ಗೆ 1 ಕೆ.ಜಿ ಬೀನ್ಸ್ ಮಾರಾಟ ಮಾಡಿ 20 ಲಕ್ಷ ಬಂಪರ್‌ ಲಾಭ |

ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…

16 hours ago