ಅ.1 : ಶನಿವಾರಸಂತೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ

September 30, 2019
3:30 PM

ಮಡಿಕೇರಿ: ಶನಿವಾರಸಂತೆಯ ನಮ್ಮ ಬೆಳೆಗಾರರ ಸ್ವಸಹಾಯ ಸಂಘ, ಕರ್ನಾಟಕ ಬೆಳೆಗಾರರ ಒಕ್ಕೂಟದ ಕೊಡಗು ಶಾಖೆಯ ವತಿಯಿಂದ ಅ.1 ರಂದು ಮಂಗಳವಾರ ಶನಿವಾರಸಂತೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಆಯೋಜಿಸಲ್ಪಟ್ಟಿದೆ.

ಅ.1 ರಂದು ಬೆಳಗ್ಗೆ 10 ಗಂಟೆಗೆ ಶನಿವಾರಸಂತೆಯ ಗುಡುಗಳಲೆ ಶ್ರೀ ಮಂಜುನಾಥ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆಯುವ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಫಿ ಮಂಡಳಿಯ ಹಾಸನದ ಜಂಟಿ ನಿರ್ದೇಶಕ ಗುಡ್ಡೇಗೌಡ್ರು ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.

Advertisement

ಕೊಡಗು ಜಿಲ್ಲಾ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ರೈತರ ಉತ್ಪಾದನಾ ಸಂಸ್ಥೆಯ ವಿಚಾರವಾಗಿ ಮಾಹಿತಿ ನೀಡಲಿದ್ದು, ಮಡಿಕೇರಿಯ ಕಾಫಿ ಮಂಡಳಿ ಉಪನಿರ್ದೇಶಕ ಶಿವಕುಮಾರಸ್ವಾಮಿ ಕಾಫಿ ಮಂಡಳಿಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸೋಮವಾರಪೇಟೆ ಕಾಫಿ ಮಂಡಳಿ ಎಸ್.ಎಲ್.ಓ. ಮುರಳೀಧರ್ ರೈತರ ಕಾಫಿ ಉತ್ಪಾದಕ ಉಪಉತ್ಪನ್ನಗಳಿಂದ ದಿನನಿತ್ಯದ ಪ್ಲಾಸ್ಟಿಕ್ ತ್ಯಜಿಸುವ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಅಂಗವಾಗಿ ನಮ್ಮಬೆಳೆಗಾರರ ಸ್ವಸಹಾಯ ಸಂಘದ ವತಿಯಿಂದ ಕಾಫಿ ಪುಡಿಯನ್ನು ಬಳಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಕಾಫಿ ವಿತರಿಸಲಾಗುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ
June 28, 2026
6:57 AM
by: ದ ರೂರಲ್ ಮಿರರ್.ಕಾಂ
ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror