ಮಡಿಕೇರಿ: ಶನಿವಾರಸಂತೆಯ ನಮ್ಮ ಬೆಳೆಗಾರರ ಸ್ವಸಹಾಯ ಸಂಘ, ಕರ್ನಾಟಕ ಬೆಳೆಗಾರರ ಒಕ್ಕೂಟದ ಕೊಡಗು ಶಾಖೆಯ ವತಿಯಿಂದ ಅ.1 ರಂದು ಮಂಗಳವಾರ ಶನಿವಾರಸಂತೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಆಯೋಜಿಸಲ್ಪಟ್ಟಿದೆ.
ಅ.1 ರಂದು ಬೆಳಗ್ಗೆ 10 ಗಂಟೆಗೆ ಶನಿವಾರಸಂತೆಯ ಗುಡುಗಳಲೆ ಶ್ರೀ ಮಂಜುನಾಥ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆಯುವ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಫಿ ಮಂಡಳಿಯ ಹಾಸನದ ಜಂಟಿ ನಿರ್ದೇಶಕ ಗುಡ್ಡೇಗೌಡ್ರು ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಕೊಡಗು ಜಿಲ್ಲಾ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ರೈತರ ಉತ್ಪಾದನಾ ಸಂಸ್ಥೆಯ ವಿಚಾರವಾಗಿ ಮಾಹಿತಿ ನೀಡಲಿದ್ದು, ಮಡಿಕೇರಿಯ ಕಾಫಿ ಮಂಡಳಿ ಉಪನಿರ್ದೇಶಕ ಶಿವಕುಮಾರಸ್ವಾಮಿ ಕಾಫಿ ಮಂಡಳಿಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸೋಮವಾರಪೇಟೆ ಕಾಫಿ ಮಂಡಳಿ ಎಸ್.ಎಲ್.ಓ. ಮುರಳೀಧರ್ ರೈತರ ಕಾಫಿ ಉತ್ಪಾದಕ ಉಪಉತ್ಪನ್ನಗಳಿಂದ ದಿನನಿತ್ಯದ ಪ್ಲಾಸ್ಟಿಕ್ ತ್ಯಜಿಸುವ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಅಂಗವಾಗಿ ನಮ್ಮಬೆಳೆಗಾರರ ಸ್ವಸಹಾಯ ಸಂಘದ ವತಿಯಿಂದ ಕಾಫಿ ಪುಡಿಯನ್ನು ಬಳಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಕಾಫಿ ವಿತರಿಸಲಾಗುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…