ಮಡಿಕೇರಿ: ಶನಿವಾರಸಂತೆಯ ನಮ್ಮ ಬೆಳೆಗಾರರ ಸ್ವಸಹಾಯ ಸಂಘ, ಕರ್ನಾಟಕ ಬೆಳೆಗಾರರ ಒಕ್ಕೂಟದ ಕೊಡಗು ಶಾಖೆಯ ವತಿಯಿಂದ ಅ.1 ರಂದು ಮಂಗಳವಾರ ಶನಿವಾರಸಂತೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಆಯೋಜಿಸಲ್ಪಟ್ಟಿದೆ.
ಅ.1 ರಂದು ಬೆಳಗ್ಗೆ 10 ಗಂಟೆಗೆ ಶನಿವಾರಸಂತೆಯ ಗುಡುಗಳಲೆ ಶ್ರೀ ಮಂಜುನಾಥ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆಯುವ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಫಿ ಮಂಡಳಿಯ ಹಾಸನದ ಜಂಟಿ ನಿರ್ದೇಶಕ ಗುಡ್ಡೇಗೌಡ್ರು ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಕೊಡಗು ಜಿಲ್ಲಾ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ರೈತರ ಉತ್ಪಾದನಾ ಸಂಸ್ಥೆಯ ವಿಚಾರವಾಗಿ ಮಾಹಿತಿ ನೀಡಲಿದ್ದು, ಮಡಿಕೇರಿಯ ಕಾಫಿ ಮಂಡಳಿ ಉಪನಿರ್ದೇಶಕ ಶಿವಕುಮಾರಸ್ವಾಮಿ ಕಾಫಿ ಮಂಡಳಿಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸೋಮವಾರಪೇಟೆ ಕಾಫಿ ಮಂಡಳಿ ಎಸ್.ಎಲ್.ಓ. ಮುರಳೀಧರ್ ರೈತರ ಕಾಫಿ ಉತ್ಪಾದಕ ಉಪಉತ್ಪನ್ನಗಳಿಂದ ದಿನನಿತ್ಯದ ಪ್ಲಾಸ್ಟಿಕ್ ತ್ಯಜಿಸುವ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಅಂಗವಾಗಿ ನಮ್ಮಬೆಳೆಗಾರರ ಸ್ವಸಹಾಯ ಸಂಘದ ವತಿಯಿಂದ ಕಾಫಿ ಪುಡಿಯನ್ನು ಬಳಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಕಾಫಿ ವಿತರಿಸಲಾಗುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…
ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…
ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…