ಮಡಿಕೇರಿ: ಶನಿವಾರಸಂತೆಯ ನಮ್ಮ ಬೆಳೆಗಾರರ ಸ್ವಸಹಾಯ ಸಂಘ, ಕರ್ನಾಟಕ ಬೆಳೆಗಾರರ ಒಕ್ಕೂಟದ ಕೊಡಗು ಶಾಖೆಯ ವತಿಯಿಂದ ಅ.1 ರಂದು ಮಂಗಳವಾರ ಶನಿವಾರಸಂತೆಯಲ್ಲಿ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಆಯೋಜಿಸಲ್ಪಟ್ಟಿದೆ.
ಅ.1 ರಂದು ಬೆಳಗ್ಗೆ 10 ಗಂಟೆಗೆ ಶನಿವಾರಸಂತೆಯ ಗುಡುಗಳಲೆ ಶ್ರೀ ಮಂಜುನಾಥ ಪೆಟ್ರೋಲ್ ಬಂಕ್ ಬಳಿಯಲ್ಲಿ ನಡೆಯುವ ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಕಾರ್ಯಕ್ರಮದಲ್ಲಿ ಕಾಫಿ ಮಂಡಳಿಯ ಹಾಸನದ ಜಂಟಿ ನಿರ್ದೇಶಕ ಗುಡ್ಡೇಗೌಡ್ರು ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಕೊಡಗು ಜಿಲ್ಲಾ ಕರ್ನಾಟಕ ಬೆಳೆಗಾರರ ಒಕ್ಕೂಟದ ಸಂಘಟನಾ ಕಾರ್ಯದರ್ಶಿ ಕೆ.ಕೆ.ವಿಶ್ವನಾಥ್ ರೈತರ ಉತ್ಪಾದನಾ ಸಂಸ್ಥೆಯ ವಿಚಾರವಾಗಿ ಮಾಹಿತಿ ನೀಡಲಿದ್ದು, ಮಡಿಕೇರಿಯ ಕಾಫಿ ಮಂಡಳಿ ಉಪನಿರ್ದೇಶಕ ಶಿವಕುಮಾರಸ್ವಾಮಿ ಕಾಫಿ ಮಂಡಳಿಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸೋಮವಾರಪೇಟೆ ಕಾಫಿ ಮಂಡಳಿ ಎಸ್.ಎಲ್.ಓ. ಮುರಳೀಧರ್ ರೈತರ ಕಾಫಿ ಉತ್ಪಾದಕ ಉಪಉತ್ಪನ್ನಗಳಿಂದ ದಿನನಿತ್ಯದ ಪ್ಲಾಸ್ಟಿಕ್ ತ್ಯಜಿಸುವ ಬಗ್ಗೆ ಮಾಹಿತಿ ನೀಡಲಿದ್ದಾರೆ. ಅಂತರರಾಷ್ಟ್ರೀಯ ಕಾಫಿ ದಿನಾಚರಣೆ ಅಂಗವಾಗಿ ನಮ್ಮಬೆಳೆಗಾರರ ಸ್ವಸಹಾಯ ಸಂಘದ ವತಿಯಿಂದ ಕಾಫಿ ಪುಡಿಯನ್ನು ಬಳಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡವರಿಗೆ ಕಾಫಿ ವಿತರಿಸಲಾಗುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…